ರಾಜ್ಯ ನ್ಯೂಸ್

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ  : ಖರ್ಗೆ ತವರಿನಿಂದಲೇ  ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ – Vishwanews24

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ  : ಖರ್ಗೆ ತವರಿನಿಂದಲೇ  ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ

ಕಲಬುರಗಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಭರ್ಜರಿ ರೋಡ್‌ಶೋ

ಕಲಬುರಗಿ: ಲೋಕಸಭೆ ಕುರುಕ್ಷೇತ್ರಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಶನಿವಾರ) ಲೋಕಸಭೆಗೆ ದಿನಾಂಕ ಘೋಷಣೆ ಆಗಲಿದೆ. ಈ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷ ಖರ್ಗೆ ತವರಿನಿಂದಲೇ  ಪ್ರಧಾನಿ ಮೋದಿ  ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡುತ್ತಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಸೇನಾ ಹೆಲಿಕಾಪ್ಟರ್ ಮೂಲಕ ಡಿಎಆರ್ ಹೆಲಿಪ್ಯಾಡ್‌ಗೆ ಮೋದಿ ಆಗಮಿಸಲಿದ್ದಾರೆ. ಡಿಎಆರ್ ಮೈದಾನದಿಂದ ಎನ್.ವಿ ಮೈದಾನದ ವರೆಗೆ ಒಂದೂವರೆ ಕಿಲೋ ಮೀಟರ್ ರೋಡ್ ಶೋ ನಡೆಸಲಿದ್ದಾರೆ. 13 ರಿಂದ 15 ನಿಮಿಷ ರೋಡ್ ಶೋ ನಡೆಯಲಿದೆ. ಇದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 2 ಗಂಟೆಗೆ ಶುರುವಾಗುವ ಈ ಕಾರ್ಯಕ್ರಮದಲ್ಲಿ ಅಂದಾಜು 2 ಲಕ್ಷ ಜನ ಸೇರಲಿದ್ದಾರೆ. ಇದಕ್ಕಾಗಿ ನಗರದ ಎನ್‌ವಿ ಮೈದಾನದಲ್ಲಿ ಭರದ ಸಿದ್ಧತೆ ಸಹ ಮಾಡಲಾಗಿದೆ. ಇನ್ನು ಮಿನಿ ರೋಡ್ ಶೋ ಬಳಿಕ ನೇರ ಎನ್.ವಿ ಮೈದಾನಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇನ್ನು ಮೋದಿ ಅವರ ಈ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಘಟಕ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸುಮಾರು 50 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಲೋಕಸಮರಕ್ಕೆ ದಿನಾಂಕ ಘೋಷಣೆಯಾಗಲಿದೆ. ನೀತಿ ಸಂಹಿತೆ ಜಾರಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಮೋದಿ ಭಾಷಣದ ಮೇಲೆ ದೇಶದ 140 ಕೋಟಿ ಜನರ ಕಣ್ಣು ಬಿದ್ದಿದೆ.

140 ಕೋಟಿ ಜನರನ್ನ ಉದ್ದೇಶಿಸಿ ಪ್ರಧಾನಿಯಾಗಿ ಮೋದಿ ತಮ್ಮ 2ನೇ ಅವಧಿಯ ಕೊನೆ ಭಾಷಣ ಮಾಡಲಿದ್ದಾರೆ. ಕಲಬುರಗಿಯಿಂದಲೇ ಮೋದಿ 3.0 ಕಾರ್ಯಕ್ರಮಕ್ಕೆ ಕರೆ ನೀಡಲಿದ್ದಾರೆ. ಹೀಗಾಗಿ ಮೋದಿ ಭಾಷಣದತ್ತ ಇಡೀ ರಾಷ್ಟ್ರದ ಜನರ ಚಿತ್ತ ನೆಟ್ಟಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago