ರಾಜ್ಯ ನ್ಯೂಸ್

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ  : ಖರ್ಗೆ ತವರಿನಿಂದಲೇ  ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ – Vishwanews24

ಲೋಕಸಭೆ ಚುನಾವಣೆಗೆ ಮೋದಿ ರಣಕಹಳೆ  : ಖರ್ಗೆ ತವರಿನಿಂದಲೇ  ಪ್ರಧಾನಿ ಅಬ್ಬರದ ಪ್ರಚಾರಕ್ಕೆ ಚಾಲನೆ

ಕಲಬುರಗಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಭರ್ಜರಿ ರೋಡ್‌ಶೋ

ಕಲಬುರಗಿ: ಲೋಕಸಭೆ ಕುರುಕ್ಷೇತ್ರಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಶನಿವಾರ) ಲೋಕಸಭೆಗೆ ದಿನಾಂಕ ಘೋಷಣೆ ಆಗಲಿದೆ. ಈ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷ ಖರ್ಗೆ ತವರಿನಿಂದಲೇ  ಪ್ರಧಾನಿ ಮೋದಿ  ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡುತ್ತಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಸೇನಾ ಹೆಲಿಕಾಪ್ಟರ್ ಮೂಲಕ ಡಿಎಆರ್ ಹೆಲಿಪ್ಯಾಡ್‌ಗೆ ಮೋದಿ ಆಗಮಿಸಲಿದ್ದಾರೆ. ಡಿಎಆರ್ ಮೈದಾನದಿಂದ ಎನ್.ವಿ ಮೈದಾನದ ವರೆಗೆ ಒಂದೂವರೆ ಕಿಲೋ ಮೀಟರ್ ರೋಡ್ ಶೋ ನಡೆಸಲಿದ್ದಾರೆ. 13 ರಿಂದ 15 ನಿಮಿಷ ರೋಡ್ ಶೋ ನಡೆಯಲಿದೆ. ಇದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 2 ಗಂಟೆಗೆ ಶುರುವಾಗುವ ಈ ಕಾರ್ಯಕ್ರಮದಲ್ಲಿ ಅಂದಾಜು 2 ಲಕ್ಷ ಜನ ಸೇರಲಿದ್ದಾರೆ. ಇದಕ್ಕಾಗಿ ನಗರದ ಎನ್‌ವಿ ಮೈದಾನದಲ್ಲಿ ಭರದ ಸಿದ್ಧತೆ ಸಹ ಮಾಡಲಾಗಿದೆ. ಇನ್ನು ಮಿನಿ ರೋಡ್ ಶೋ ಬಳಿಕ ನೇರ ಎನ್.ವಿ ಮೈದಾನಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇನ್ನು ಮೋದಿ ಅವರ ಈ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಘಟಕ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸುಮಾರು 50 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಲೋಕಸಮರಕ್ಕೆ ದಿನಾಂಕ ಘೋಷಣೆಯಾಗಲಿದೆ. ನೀತಿ ಸಂಹಿತೆ ಜಾರಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಮೋದಿ ಭಾಷಣದ ಮೇಲೆ ದೇಶದ 140 ಕೋಟಿ ಜನರ ಕಣ್ಣು ಬಿದ್ದಿದೆ.

140 ಕೋಟಿ ಜನರನ್ನ ಉದ್ದೇಶಿಸಿ ಪ್ರಧಾನಿಯಾಗಿ ಮೋದಿ ತಮ್ಮ 2ನೇ ಅವಧಿಯ ಕೊನೆ ಭಾಷಣ ಮಾಡಲಿದ್ದಾರೆ. ಕಲಬುರಗಿಯಿಂದಲೇ ಮೋದಿ 3.0 ಕಾರ್ಯಕ್ರಮಕ್ಕೆ ಕರೆ ನೀಡಲಿದ್ದಾರೆ. ಹೀಗಾಗಿ ಮೋದಿ ಭಾಷಣದತ್ತ ಇಡೀ ರಾಷ್ಟ್ರದ ಜನರ ಚಿತ್ತ ನೆಟ್ಟಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

20 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

21 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

22 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

23 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

23 hours ago