Featured

ಲೋಕಸಭೆ ಚುನಾವಣೆಗೆ ​ಕೈ ರಣಕಹಳೆ … ಇಂದು ಹಾವೇರಿಗೆ ರಾಹುಲ್ ಭೇಟಿ – Vishwanews24

ಹಾವೇರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆ ನಡೆದಿದ್ದು, ವಿಶೇಷ ಪೊಲೀಸ್ ಬಿಗಿ ಭದ್ರತೆಯಲ್ಲಿ ಸಮಾವೇಶ ನಡೆಯಲಿದೆ. 1.5 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ರಾಹುಲ್ ಜತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಸಿ ಎಂ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್, ಲೋಕಸಭೆ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ವಿವಿಧ ಸಚಿವರು, ಶಾಸಕರು ಪಾಲ್ಗೊಳ್ಳುತ್ತಿದ್ದಾರೆ.

ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿರುವ ಸಮಾವೇಶದಲ್ಲಿ ಹಾವೇರಿ, ಗದಗ ಎರಡೂ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಅಭಿಮಾನಿಗಳು ಆಗಮಿಸಲಿದ್ದಾರೆ. ವಿಶೇಷ ಅಂದರೆ ಉತ್ತರ ಪ್ರದೇಶದ ಒಂದು ಭಾಗದ ಉಸ್ತುವಾರಿಯಾಗಿರುವ ಪ್ರಿಯಾಂಕ ಗಾಂಧಿ ಅವರ ಬೃಹತ್ ಪೋಸ್ಟರ್​ಗಳು, ಬ್ಯಾನರ್​ಗಳು ಹಾವೇರಿಯಲ್ಲಿ ರಾರಾಜಿಸುತ್ತಿರುವುದು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಇಂದು ಸಮಾವೇಶಕ್ಕೆ ರಾಹುಲ್ ಗಾಂಧಿ ಮಧ್ಯಾಹ್ನ 1 ಗಂಟೆಗೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಮುನ್ನವೇ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿಕೊಟ್ಟು ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸುತ್ತಿದ್ದಾರೆ. ಮೂರು ದಿನದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕಲಬುರ್ಗಿಗೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಂಡು ತೆರಳಿದ್ದಾರೆ. ಈ ಹಿಂದೆ ಹುಬ್ಬಳ್ಳಿಗೂ ಭೇಟಿ ಕೊಟ್ಟಿದ್ದರು. ಒಟ್ಟಾರೆ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲುವುದು ಪ್ರಮುಖವಾಗಿದ್ದು, ಮೇಲಿಂದ ಮೇಲೆ ರಾಷ್ಟ್ರೀಯ ನಾಯಕರು ಭೇಟಿ ಕೊಟ್ಟು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago