Featured

ಲೋಕಸಭೆ ಚುನಾವಣೆ :ಕಾಂಗ್ರೆಸ್‌ – ಎಎಪಿ ನಡುವೆ ಸೀಟು ಹಂಚಿಕೆ ಫೈನಲ್‌ – Vishwanews24

ಲೋಕಸಭೆ ಚುನಾವಣೆ :ಕಾಂಗ್ರೆಸ್‌, ಎಎಪಿ ನಡುವೆ ಸೀಟು ಹಂಚಿಕೆ ಫೈನಲ್‌

ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ(ಎಎಪಿ) ಹಾಗೂ ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಅಂತಿಮವಾಗಿದೆ. ದೆಹಲಿ, ಗುಜರಾತ್, ಹರ್ಯಾಣ, ಗೋವಾ ಮತ್ತು ಚಂಡೀಗಢದಂತಹ ಇತರ ರಾಜ್ಯಗಳಿಗೆ ತಮ್ಮ ಸೀಟು ಹಂಚಿಕೆ ಒಪ್ಪಂದವನ್ನು ಘೋಷಣೆ ಮಾಡಿದೆ.

ಈ ಬಗ್ಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಅವರು, ದೆಹಲಿಯ 7 ಲೋಕಸಭಾ ಕ್ಷೇತ್ರಗಳ ಪೈಕಿ, ಕಾಂಗ್ರೆಸ್ ಪಕ್ಷ 3 ಕ್ಷೇತ್ರದಲ್ಲಿ ಹಾಗೂ ಎಎಪಿ 4 ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ. ಇನ್ನು ಗುಜರಾತ್ ನ 26 ಲೋಕಸಭಾ ಕ್ಷೇತ್ರದಲ್ಲಿ 24 ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ 2 ಕ್ಷೇತ್ರದಲ್ಲಿ ಎಎಪಿ ಸ್ಪರ್ಧಿಸಲಿದೆ. ಹರ್ಯಾಣದ 10 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ 9 ಕ್ಷೇತ್ರಗಳಲ್ಲಿ ಹಾಗೂ ಕೇವಲ ಒಂದೇ ಒಂದು ಕ್ಷೇತ್ರದಲ್ಲಿ ಎಎಪಿ ಸ್ಪರ್ಧಿಸಲಿದೆ. ಚಂಡೀಗಡ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಚುನಾವಣಾ ಅಖಾಡಕ್ಕೆ ಇಳಿಯಲಿದೆ ಎಂದರು.

ಇನ್ನು ಪಂಜಾಬ್ ಗೆ ಯಾವುದೇ ಸೀಟು ಹಂಚಿಕೆ ಒಪ್ಪಂದ ಘೋಷಿಸಿಲ್ಲ. ಆದರೆ ಪಂಜಾಬ್ ನ ಎಲ್ಲಾ 13 ಲೋಕಸಭಾ ಕ್ಷೇತ್ರದಲ್ಲಿ ಎಎಪಿ ಸ್ಪರ್ಧಿಸುವುದಾಗಿ ಮೊದಲೇ ಹೇಳಿತ್ತು. ಈ ಎರಡೂ ಪಕ್ಷಗಳು ತಮ್ಮ ತಮ್ಮ ಚಿಹ್ನೆಯಲ್ಲೇ ಈ ಬಾರಿಯ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಲಿವೆ. ಮೈತ್ರಿಗೆ ದೇಶ ಮುಖ್ಯ ಹಾಗೂ ಯಾವುದೇ ಪಕ್ಷವಲ್ಲ ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

6 minutes ago

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…

10 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…

16 minutes ago

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…

22 minutes ago

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

18 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

19 hours ago