ನಾಸಿಕ್/ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ “ಯುವ ನ್ಯಾಯ’, “ನಾರಿ ನ್ಯಾಯ’ದ ಬಳಿಕ ಈಗ ಕಾಂಗ್ರೆಸ್ ರೈತರ ಓಲೈಕೆಗೆ ಮುಂದಾಗಿದೆ. ಅದಕ್ಕಾಗಿ “ರೈತ ನ್ಯಾಯ’ದ ಹೆಸರಿನಲ್ಲಿ “ಐದು ಗ್ಯಾರಂಟಿ’ ಗಳನ್ನು ಗುರುವಾರ ಪ್ರಕಟಿಸಿದೆ. ಈ ಪೈಕಿ ಅಗತ್ಯವಿರುವ ಕೃಷಿ ಸಾಲಮನ್ನಾ ಮೊತ್ತವನ್ನು ನಿರ್ಧ
ರಿಸುವುದಕ್ಕಾಗಿ “ಕೃಷಿ ಸಾಲ ಮನ್ನಾ ಆಯೋಗ’ ಸೃಷ್ಟಿ ಮತ್ತು “ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಗೆ ಕಾನೂನು ಮಾನ್ಯತೆ’ ನೀಡುವುದು ಪಕ್ಷದ ಪ್ರಮುಖ ಭರವಸೆಯಾಗಿದೆ.
ಕನಿಷ್ಠ ಬೆಂಬಲ ಬೆಲೆಗಾಗಿ ರೈತರು “ದಿಲ್ಲಿ ಚಲೋ’ ಕಾರ್ಯಕ್ರಮ ಹಮ್ಮಿ ಕೊಂಡಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಐದು ಗ್ಯಾರಂಟಿಗಳನ್ನು ಒಳಗೊಂಡಿರುವ ಕಿಸಾನ್ ನ್ಯಾಯ (ರೈತ ನ್ಯಾಯ) ಪ್ರಕಟಿಸಿದ್ದಾರೆ. ಇದೇ ವೇಳೆ ನಾಸಿಕ್ನಲ್ಲಿ ಮಾತನಾಡಿದ ಅವರು ದೇಶದ ರೈತ ವರ್ಗವನ್ನು ಜಿಎಸ್ಟಿ ಯಿಂದ ಹೊರಗಿಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಐಎನ್ಡಿಐಎ ಒಕ್ಕೂಟದ ಸರಕಾರ ರೈತರ ಪರವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ದೇಶದ ಅನ್ನದಾತರ ಎಲ್ಲ ಸಮಸ್ಯೆಗಳನ್ನು ಬೇರು ಸಮೇತ ಕಿತ್ತೆಸೆಯುವ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ನೀಡಲಿದೆ. ಬೆವರು ಸುರಿಸಿ, ಉಳುಮೆ ಮಾಡುವ ರೈತರ ಬದುಕನ್ನು ಸಂತೋಷಗೊಳಿಸುವ ಗುರಿಯನ್ನು ಕಾಂಗ್ರೆಸ್ ಹಾಕಿಕೊಂಡಿದೆ. ಐತಿಹಾಸಿಕ ಈ ಐದು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.
ರೈತ ನ್ಯಾಯದ 5 ಗ್ಯಾರಂಟಿಗಳು
1 .ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ
ಸ್ವಾಮಿನಾಥನ್ ಶಿಫಾರಸುಗಳ ಅನ್ವಯ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಗೆ ಕಾನೂನು ಮಾನ್ಯತೆ.
2. ಕೃಷಿ ಸಾಲ ಮನ್ನಾ ಆಯೋಗ
ರೈತರ ಸಾಲ ಮನ್ನಾ ಮತ್ತು ಮನ್ನಾ ಮೊತ್ತವನ್ನು ನಿರ್ಧ ರಿಸುವುದಕ್ಕಾಗಿ ಕೃಷಿ ಸಾಲಮನ್ನಾ ಶಾಶ್ವತ ಆಯೋಗ ರಚನೆ.
3 .ವಿಮಾ ಗ್ಯಾರಂಟಿ
ಬೆಳೆ ನಾಶವಾದ ಸಂದರ್ಭದಲ್ಲಿ 30 ದಿನದೊಳಗೇ ರೈತರ ಖಾತೆಗಳಿಗೆ ನೇರವಾಗಿ ಹಣ. ಈ ಸಂಬಂಧ ವಿಮಾ ಯೋಜನೆ ಮರುವಿನ್ಯಾಸ.
4 .ಹೊಸ ಆಮದು-ರಫ್ತು ನೀತಿ
ರೈತರ ಹಿತಾಸಕ್ತಿಗಳನ್ನು ಗಮನದಲ್ಲಿ ಇರಿಸಿಕೊಂಡು ಹೊಸ ಆಮದು-ರಫ್ತು ನೀತಿ ಜಾರಿ.
5. ಜಿಎಸ್ಟಿ ಮುಕ್ತ ರೈತ
ಕೃಷಿ ಉತ್ಪನ್ನಗಳನ್ನು ಜಿಎಸ್ಟಿ ಯಿಂದ ಹೊರಗಿಡಲು ಜಿಎಸ್ಟಿಗೆ ತಿದ್ದುಪಡಿಯ ಗ್ಯಾರಂಟಿ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…