ನಾಸಿಕ್/ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ “ಯುವ ನ್ಯಾಯ’, “ನಾರಿ ನ್ಯಾಯ’ದ ಬಳಿಕ ಈಗ ಕಾಂಗ್ರೆಸ್ ರೈತರ ಓಲೈಕೆಗೆ ಮುಂದಾಗಿದೆ. ಅದಕ್ಕಾಗಿ “ರೈತ ನ್ಯಾಯ’ದ ಹೆಸರಿನಲ್ಲಿ “ಐದು ಗ್ಯಾರಂಟಿ’ ಗಳನ್ನು ಗುರುವಾರ ಪ್ರಕಟಿಸಿದೆ. ಈ ಪೈಕಿ ಅಗತ್ಯವಿರುವ ಕೃಷಿ ಸಾಲಮನ್ನಾ ಮೊತ್ತವನ್ನು ನಿರ್ಧ
ರಿಸುವುದಕ್ಕಾಗಿ “ಕೃಷಿ ಸಾಲ ಮನ್ನಾ ಆಯೋಗ’ ಸೃಷ್ಟಿ ಮತ್ತು “ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಗೆ ಕಾನೂನು ಮಾನ್ಯತೆ’ ನೀಡುವುದು ಪಕ್ಷದ ಪ್ರಮುಖ ಭರವಸೆಯಾಗಿದೆ.
ಕನಿಷ್ಠ ಬೆಂಬಲ ಬೆಲೆಗಾಗಿ ರೈತರು “ದಿಲ್ಲಿ ಚಲೋ’ ಕಾರ್ಯಕ್ರಮ ಹಮ್ಮಿ ಕೊಂಡಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಐದು ಗ್ಯಾರಂಟಿಗಳನ್ನು ಒಳಗೊಂಡಿರುವ ಕಿಸಾನ್ ನ್ಯಾಯ (ರೈತ ನ್ಯಾಯ) ಪ್ರಕಟಿಸಿದ್ದಾರೆ. ಇದೇ ವೇಳೆ ನಾಸಿಕ್ನಲ್ಲಿ ಮಾತನಾಡಿದ ಅವರು ದೇಶದ ರೈತ ವರ್ಗವನ್ನು ಜಿಎಸ್ಟಿ ಯಿಂದ ಹೊರಗಿಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ. ಐಎನ್ಡಿಐಎ ಒಕ್ಕೂಟದ ಸರಕಾರ ರೈತರ ಪರವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ದೇಶದ ಅನ್ನದಾತರ ಎಲ್ಲ ಸಮಸ್ಯೆಗಳನ್ನು ಬೇರು ಸಮೇತ ಕಿತ್ತೆಸೆಯುವ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ನೀಡಲಿದೆ. ಬೆವರು ಸುರಿಸಿ, ಉಳುಮೆ ಮಾಡುವ ರೈತರ ಬದುಕನ್ನು ಸಂತೋಷಗೊಳಿಸುವ ಗುರಿಯನ್ನು ಕಾಂಗ್ರೆಸ್ ಹಾಕಿಕೊಂಡಿದೆ. ಐತಿಹಾಸಿಕ ಈ ಐದು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.
ರೈತ ನ್ಯಾಯದ 5 ಗ್ಯಾರಂಟಿಗಳು
1 .ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ
ಸ್ವಾಮಿನಾಥನ್ ಶಿಫಾರಸುಗಳ ಅನ್ವಯ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ)ಗೆ ಕಾನೂನು ಮಾನ್ಯತೆ.
2. ಕೃಷಿ ಸಾಲ ಮನ್ನಾ ಆಯೋಗ
ರೈತರ ಸಾಲ ಮನ್ನಾ ಮತ್ತು ಮನ್ನಾ ಮೊತ್ತವನ್ನು ನಿರ್ಧ ರಿಸುವುದಕ್ಕಾಗಿ ಕೃಷಿ ಸಾಲಮನ್ನಾ ಶಾಶ್ವತ ಆಯೋಗ ರಚನೆ.
3 .ವಿಮಾ ಗ್ಯಾರಂಟಿ
ಬೆಳೆ ನಾಶವಾದ ಸಂದರ್ಭದಲ್ಲಿ 30 ದಿನದೊಳಗೇ ರೈತರ ಖಾತೆಗಳಿಗೆ ನೇರವಾಗಿ ಹಣ. ಈ ಸಂಬಂಧ ವಿಮಾ ಯೋಜನೆ ಮರುವಿನ್ಯಾಸ.
4 .ಹೊಸ ಆಮದು-ರಫ್ತು ನೀತಿ
ರೈತರ ಹಿತಾಸಕ್ತಿಗಳನ್ನು ಗಮನದಲ್ಲಿ ಇರಿಸಿಕೊಂಡು ಹೊಸ ಆಮದು-ರಫ್ತು ನೀತಿ ಜಾರಿ.
5. ಜಿಎಸ್ಟಿ ಮುಕ್ತ ರೈತ
ಕೃಷಿ ಉತ್ಪನ್ನಗಳನ್ನು ಜಿಎಸ್ಟಿ ಯಿಂದ ಹೊರಗಿಡಲು ಜಿಎಸ್ಟಿಗೆ ತಿದ್ದುಪಡಿಯ ಗ್ಯಾರಂಟಿ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…