ಲೋಕಸಭೆ ಚುನಾವಣೆ ಗೆಲ್ಲಲು ಪುಲ್ವಾಮಾ ಉಗ್ರ ದಾಳಿಯನ್ನು ಮೋದಿ ಸರ್ಕಾರವೇ ಮಾಡಿಸಿರಬಹುದು : ಎಸ್‌ಪಿ ನಾಯಕ – Vishwanews24

Featured, ರಾಷ್ಟ್ರ ನ್ಯೂಸ್

ಹೊಸದಿಲ್ಲಿಲೋಕಸಭೆ ಚುನಾವಣೆಯಲ್ಲಿ ಮತಗಳಿಸಲು ಮೋದಿ ಸರಕಾರ ಪುಲ್ವಾಮಾ ದಾಳಿಯನ್ನು ಪ್ಲಾನ್‌ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್‌ಗೋಪಾಲ್‌ ಯಾದವ್‌ ಶಾಕಿಂಗ್ ಆರೋಪ ಮಾಡಿದ್ದಾರೆ.

ಮತಗಳನ್ನು ಗೆಲ್ಲಲು ಎನ್‌ಡಿಎ ಸರಕಾರ ಪುಲ್ವಾಮಾ ದಾಳಿಯನ್ನು ಪ್ಲಾನ್‌ ಮಾಡಿತ್ತು ಎಂದು ಎಸ್‌ಪಿ ನಾಯಕ ರಾಮ್ ಗೋಪಾಲ್‌ ಯಾದವ್ ಆರೋಪಿಸಿದ್ದಾರೆ. ಅಲ್ಲದೆ, ಮತಗಳಿಗೋಸ್ಕರ ಸೈನಿಕರು ತಮ್ಮ ಜೀವವನ್ನೇ ತ್ಯಾಗ ಮಾಡಿರುವುದು ತನಗೆ ತೀವ್ರ ಬೇಸರ ತಂದಿದೆ ಎಂದೂ ಹೇಳಿಕೊಂಡಿದ್ದಾರೆ. ಜತೆಗೆ, ಜಮ್ಮು – ಶ್ರೀನಗರ ಹೆದ್ದಾರಿಯಲ್ಲಿ ಭದ್ರತಾ ನಿರ್ಬಂಧಗಳಿಲ್ಲದಿರುವುದು ಹೇಗೆ ಸಾಧ್ಯ ಎಂದೂ ಸಮಾಜವಾದಿ ಪಕ್ಷದ ನಾಯಕ ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಪ್ಯಾರಾಮಿಲಿಟರಿ ಪಡೆಯ ಹಿರಿಯ ಅಧಿಕಾರಿಗಳು ವಿಮಾನದಲ್ಲಿ ಅಥವಾ ಶಸ್ತ್ರಸಜ್ಜಿತ ವಾಹನಗಳಲ್ಲಿ ಪ್ರಯಾಣ ಮಾಡಬೇಕೆಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರೂ ಸಹ ಸಾಮಾನ್ಯ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು ಎಂದೂ ರಾಮ್‌ ಗೋಪಾಲ್‌ ಯಾದವ್ ಆರೋಪಿಸಿದ್ದಾರೆ.

ಕೇವಲ ಮತಗಳಿಗೋಸ್ಕರ ಸೈನಿಕರನ್ನು ಕೊಲ್ಲುವುದನ್ನು ನೋಡಿ ನನಗೆ ಬೇಸರವಾಗಿದೆ. ಜಮ್ಮು ಮತ್ತು ಶ್ರೀನಗರ ನಡುವೆ ಯಾವುದೇ ಭದ್ರತಾ ತಪಾಸಣೆ ಇಲ್ಲ. ಇದು ಪಿತೂರಿ. ಈ ಬ್ಗಗೆ ನಾನು ಈಗಲೆ ಏನನ್ನೂ ಹೇಳುವುದಿಲ್ಲ. ಆದರೆ, ಸರಕಾರ ಬದಲಾದ ಬಳಿಕ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ಹೇಳಿದ್ದಾರೆ.
ಫೆಬ್ರವರಿ 14ರಂದು ಸ್ಫೋಟಕ ತುಂಬಿದ್ದ ವಾಹನವನ್ನು ಚಲಾಯಿಸಿ 78 ಮಂದಿಯಿದ್ದ ಸಿಆರ್ಪಿಎಫ್ ಬೆಂಗಾವಲು ಪಡೆ ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಜೈಷ್ ಎ ಮೊಹಮ್ಮದ್ ಉಗ್ರ ಡಿಕ್ಕಿ ಹೊಡೆದಿದ್ದ. ಆ ಆತ್ಮಾಹುತಿ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಬಳಿಕ ಫೆಬ್ರವರಿ 26ರಂದು ಭಾರತೀಯ ವಾಯುಪಡೆ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ದಾಳಿ ನಡೆಸಿತ್ತು.