Featured

ಲೋಕಸಭೆ ಚುನಾವಣೆ ಗೆಲ್ಲಲು ಪುಲ್ವಾಮಾ ಉಗ್ರ ದಾಳಿಯನ್ನು ಮೋದಿ ಸರ್ಕಾರವೇ ಮಾಡಿಸಿರಬಹುದು : ಎಸ್‌ಪಿ ನಾಯಕ – Vishwanews24

ಹೊಸದಿಲ್ಲಿಲೋಕಸಭೆ ಚುನಾವಣೆಯಲ್ಲಿ ಮತಗಳಿಸಲು ಮೋದಿ ಸರಕಾರ ಪುಲ್ವಾಮಾ ದಾಳಿಯನ್ನು ಪ್ಲಾನ್‌ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್‌ಗೋಪಾಲ್‌ ಯಾದವ್‌ ಶಾಕಿಂಗ್ ಆರೋಪ ಮಾಡಿದ್ದಾರೆ.

ಮತಗಳನ್ನು ಗೆಲ್ಲಲು ಎನ್‌ಡಿಎ ಸರಕಾರ ಪುಲ್ವಾಮಾ ದಾಳಿಯನ್ನು ಪ್ಲಾನ್‌ ಮಾಡಿತ್ತು ಎಂದು ಎಸ್‌ಪಿ ನಾಯಕ ರಾಮ್ ಗೋಪಾಲ್‌ ಯಾದವ್ ಆರೋಪಿಸಿದ್ದಾರೆ. ಅಲ್ಲದೆ, ಮತಗಳಿಗೋಸ್ಕರ ಸೈನಿಕರು ತಮ್ಮ ಜೀವವನ್ನೇ ತ್ಯಾಗ ಮಾಡಿರುವುದು ತನಗೆ ತೀವ್ರ ಬೇಸರ ತಂದಿದೆ ಎಂದೂ ಹೇಳಿಕೊಂಡಿದ್ದಾರೆ. ಜತೆಗೆ, ಜಮ್ಮು – ಶ್ರೀನಗರ ಹೆದ್ದಾರಿಯಲ್ಲಿ ಭದ್ರತಾ ನಿರ್ಬಂಧಗಳಿಲ್ಲದಿರುವುದು ಹೇಗೆ ಸಾಧ್ಯ ಎಂದೂ ಸಮಾಜವಾದಿ ಪಕ್ಷದ ನಾಯಕ ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಪ್ಯಾರಾಮಿಲಿಟರಿ ಪಡೆಯ ಹಿರಿಯ ಅಧಿಕಾರಿಗಳು ವಿಮಾನದಲ್ಲಿ ಅಥವಾ ಶಸ್ತ್ರಸಜ್ಜಿತ ವಾಹನಗಳಲ್ಲಿ ಪ್ರಯಾಣ ಮಾಡಬೇಕೆಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರೂ ಸಹ ಸಾಮಾನ್ಯ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು ಎಂದೂ ರಾಮ್‌ ಗೋಪಾಲ್‌ ಯಾದವ್ ಆರೋಪಿಸಿದ್ದಾರೆ.

ಕೇವಲ ಮತಗಳಿಗೋಸ್ಕರ ಸೈನಿಕರನ್ನು ಕೊಲ್ಲುವುದನ್ನು ನೋಡಿ ನನಗೆ ಬೇಸರವಾಗಿದೆ. ಜಮ್ಮು ಮತ್ತು ಶ್ರೀನಗರ ನಡುವೆ ಯಾವುದೇ ಭದ್ರತಾ ತಪಾಸಣೆ ಇಲ್ಲ. ಇದು ಪಿತೂರಿ. ಈ ಬ್ಗಗೆ ನಾನು ಈಗಲೆ ಏನನ್ನೂ ಹೇಳುವುದಿಲ್ಲ. ಆದರೆ, ಸರಕಾರ ಬದಲಾದ ಬಳಿಕ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ಹೇಳಿದ್ದಾರೆ.
ಫೆಬ್ರವರಿ 14ರಂದು ಸ್ಫೋಟಕ ತುಂಬಿದ್ದ ವಾಹನವನ್ನು ಚಲಾಯಿಸಿ 78 ಮಂದಿಯಿದ್ದ ಸಿಆರ್ಪಿಎಫ್ ಬೆಂಗಾವಲು ಪಡೆ ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಜೈಷ್ ಎ ಮೊಹಮ್ಮದ್ ಉಗ್ರ ಡಿಕ್ಕಿ ಹೊಡೆದಿದ್ದ. ಆ ಆತ್ಮಾಹುತಿ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಬಳಿಕ ಫೆಬ್ರವರಿ 26ರಂದು ಭಾರತೀಯ ವಾಯುಪಡೆ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ದಾಳಿ ನಡೆಸಿತ್ತು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago