Featured

ಲೋಕಸಭೆ ಚುನಾವಣೆ ಗೆಲ್ಲಲು ಪುಲ್ವಾಮಾ ಉಗ್ರ ದಾಳಿಯನ್ನು ಮೋದಿ ಸರ್ಕಾರವೇ ಮಾಡಿಸಿರಬಹುದು : ಎಸ್‌ಪಿ ನಾಯಕ – Vishwanews24

ಹೊಸದಿಲ್ಲಿಲೋಕಸಭೆ ಚುನಾವಣೆಯಲ್ಲಿ ಮತಗಳಿಸಲು ಮೋದಿ ಸರಕಾರ ಪುಲ್ವಾಮಾ ದಾಳಿಯನ್ನು ಪ್ಲಾನ್‌ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್‌ಗೋಪಾಲ್‌ ಯಾದವ್‌ ಶಾಕಿಂಗ್ ಆರೋಪ ಮಾಡಿದ್ದಾರೆ.

ಮತಗಳನ್ನು ಗೆಲ್ಲಲು ಎನ್‌ಡಿಎ ಸರಕಾರ ಪುಲ್ವಾಮಾ ದಾಳಿಯನ್ನು ಪ್ಲಾನ್‌ ಮಾಡಿತ್ತು ಎಂದು ಎಸ್‌ಪಿ ನಾಯಕ ರಾಮ್ ಗೋಪಾಲ್‌ ಯಾದವ್ ಆರೋಪಿಸಿದ್ದಾರೆ. ಅಲ್ಲದೆ, ಮತಗಳಿಗೋಸ್ಕರ ಸೈನಿಕರು ತಮ್ಮ ಜೀವವನ್ನೇ ತ್ಯಾಗ ಮಾಡಿರುವುದು ತನಗೆ ತೀವ್ರ ಬೇಸರ ತಂದಿದೆ ಎಂದೂ ಹೇಳಿಕೊಂಡಿದ್ದಾರೆ. ಜತೆಗೆ, ಜಮ್ಮು – ಶ್ರೀನಗರ ಹೆದ್ದಾರಿಯಲ್ಲಿ ಭದ್ರತಾ ನಿರ್ಬಂಧಗಳಿಲ್ಲದಿರುವುದು ಹೇಗೆ ಸಾಧ್ಯ ಎಂದೂ ಸಮಾಜವಾದಿ ಪಕ್ಷದ ನಾಯಕ ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ಪ್ಯಾರಾಮಿಲಿಟರಿ ಪಡೆಯ ಹಿರಿಯ ಅಧಿಕಾರಿಗಳು ವಿಮಾನದಲ್ಲಿ ಅಥವಾ ಶಸ್ತ್ರಸಜ್ಜಿತ ವಾಹನಗಳಲ್ಲಿ ಪ್ರಯಾಣ ಮಾಡಬೇಕೆಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರೂ ಸಹ ಸಾಮಾನ್ಯ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು ಎಂದೂ ರಾಮ್‌ ಗೋಪಾಲ್‌ ಯಾದವ್ ಆರೋಪಿಸಿದ್ದಾರೆ.

ಕೇವಲ ಮತಗಳಿಗೋಸ್ಕರ ಸೈನಿಕರನ್ನು ಕೊಲ್ಲುವುದನ್ನು ನೋಡಿ ನನಗೆ ಬೇಸರವಾಗಿದೆ. ಜಮ್ಮು ಮತ್ತು ಶ್ರೀನಗರ ನಡುವೆ ಯಾವುದೇ ಭದ್ರತಾ ತಪಾಸಣೆ ಇಲ್ಲ. ಇದು ಪಿತೂರಿ. ಈ ಬ್ಗಗೆ ನಾನು ಈಗಲೆ ಏನನ್ನೂ ಹೇಳುವುದಿಲ್ಲ. ಆದರೆ, ಸರಕಾರ ಬದಲಾದ ಬಳಿಕ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ಹೇಳಿದ್ದಾರೆ.
ಫೆಬ್ರವರಿ 14ರಂದು ಸ್ಫೋಟಕ ತುಂಬಿದ್ದ ವಾಹನವನ್ನು ಚಲಾಯಿಸಿ 78 ಮಂದಿಯಿದ್ದ ಸಿಆರ್ಪಿಎಫ್ ಬೆಂಗಾವಲು ಪಡೆ ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಜೈಷ್ ಎ ಮೊಹಮ್ಮದ್ ಉಗ್ರ ಡಿಕ್ಕಿ ಹೊಡೆದಿದ್ದ. ಆ ಆತ್ಮಾಹುತಿ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಬಳಿಕ ಫೆಬ್ರವರಿ 26ರಂದು ಭಾರತೀಯ ವಾಯುಪಡೆ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ದಾಳಿ ನಡೆಸಿತ್ತು.

 

Vishwa News 24

Recent Posts

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

6 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

11 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

18 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

28 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

21 hours ago