ಇಸ್ಲಾಮಾಬಾದ್: 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸಿದರೆ ಭಾರತ ಜತೆಗಿನ ಶಾಂತಿ ಮಾತುಕತೆಗೆ ಉತ್ತಮ ಅವಕಾಶವಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪತ್ರಕರ್ತರೊಂದಿಗಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ಮುಂದಿನ ಸರ್ಕಾರವು ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದಲ್ಲಿದ್ದರೆ ಪಾಕಿಸ್ತಾನದೊಂದಿಗಿನ ಕಾಶ್ಮೀರದ ಸಮಸ್ಯೆಯ ಕುರಿತು ಬಗೆಹರಿಸಿಕೊಳ್ಳಲು ಕೊಂಚ ಭಯಪಡುವ ಸಾಧ್ಯತೆ ಇದೆ. ಬಲಪಂಥೀಯ ಪಕ್ಷವಾದ ಬಿಜೆಪಿಯು ಗೆದ್ದರೆ ಕಾಶ್ಮೀರದಲ್ಲಿನ ಸಮಸ್ಯೆಗೆ ಕೆಲವು ಪರಿಹಾರಗಳನ್ನು ಕಾಣಬಹುದು ಎಂದು ತಿಳಿಸಿದ್ದಾರೆ.
ಈಗ ಭಾರತದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನಾನು ಕಾಣಬಹುದೆಂದು ಎಂದಿಗೂ ಯೋಚಿಸಿಯೇ ಇರಲಿಲ್ಲ. ಇದೀಗ ಮುಸ್ಲಿಂ ಮತ್ತು ಮುಸ್ಲಿಮೇತರ ಮೇಲೆ ದಾಳಿ ಮಾಡಲಾಗುತ್ತಿದೆ. ಹಲವು ವರ್ಷಗಳಿಂದಲೂ ತಮ್ಮ ಅಲ್ಲಿನ ಪರಿಸ್ಥಿತಿ ಬಗ್ಗೆ ಸಂತೋಷವಾಗಿಯೇ ಇದ್ದ ಭಾರತೀಯ ಮುಸ್ಲಿಮರು ಇದೀಗ ತೀವ್ರ ಹಿಂದೂ ರಾಷ್ಟ್ರೀಯತೆಯಿಂದಾಗಿ ಆತಂಕಕ್ಕೊಳಗಾಗಿದ್ದಾರೆ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಇಮ್ರಾನ್ ಖಾನ್ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…