ಇಸ್ಲಾಮಾಬಾದ್: 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸಿದರೆ ಭಾರತ ಜತೆಗಿನ ಶಾಂತಿ ಮಾತುಕತೆಗೆ ಉತ್ತಮ ಅವಕಾಶವಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪತ್ರಕರ್ತರೊಂದಿಗಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ಮುಂದಿನ ಸರ್ಕಾರವು ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದಲ್ಲಿದ್ದರೆ ಪಾಕಿಸ್ತಾನದೊಂದಿಗಿನ ಕಾಶ್ಮೀರದ ಸಮಸ್ಯೆಯ ಕುರಿತು ಬಗೆಹರಿಸಿಕೊಳ್ಳಲು ಕೊಂಚ ಭಯಪಡುವ ಸಾಧ್ಯತೆ ಇದೆ. ಬಲಪಂಥೀಯ ಪಕ್ಷವಾದ ಬಿಜೆಪಿಯು ಗೆದ್ದರೆ ಕಾಶ್ಮೀರದಲ್ಲಿನ ಸಮಸ್ಯೆಗೆ ಕೆಲವು ಪರಿಹಾರಗಳನ್ನು ಕಾಣಬಹುದು ಎಂದು ತಿಳಿಸಿದ್ದಾರೆ.
ಈಗ ಭಾರತದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನಾನು ಕಾಣಬಹುದೆಂದು ಎಂದಿಗೂ ಯೋಚಿಸಿಯೇ ಇರಲಿಲ್ಲ. ಇದೀಗ ಮುಸ್ಲಿಂ ಮತ್ತು ಮುಸ್ಲಿಮೇತರ ಮೇಲೆ ದಾಳಿ ಮಾಡಲಾಗುತ್ತಿದೆ. ಹಲವು ವರ್ಷಗಳಿಂದಲೂ ತಮ್ಮ ಅಲ್ಲಿನ ಪರಿಸ್ಥಿತಿ ಬಗ್ಗೆ ಸಂತೋಷವಾಗಿಯೇ ಇದ್ದ ಭಾರತೀಯ ಮುಸ್ಲಿಮರು ಇದೀಗ ತೀವ್ರ ಹಿಂದೂ ರಾಷ್ಟ್ರೀಯತೆಯಿಂದಾಗಿ ಆತಂಕಕ್ಕೊಳಗಾಗಿದ್ದಾರೆ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಇಮ್ರಾನ್ ಖಾನ್ ತಿಳಿಸಿದ್ದಾರೆ.
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…