ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಗೆಲುವು ದಾಖಲಿಸಿದರೂ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗುವುದಿಲ್ಲ ಎಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಈ ಸಲದ ಲೋಕಸಭಾ ಚುನಾವಣೆ ಫಲಿತಾಂಶ ಅಚ್ಚರಿ ಉಂಟುಮಾಡಲಿದೆ, ಬಿಜೆಪಿಗೆ ಅಗತ್ಯ ಸಂಖ್ಯಾ ಬಲದ ಕೊರತೆ ಎದುರಾಗಲಿದೆ, ಒಂದು ವೇಳೆ ಬಿಜೆಪಿ ಇತರೆ ಪಕ್ಷಗಳ ಸಹಕಾರದೊಂದಿಗೆ ಸರ್ಕಾರ ರಚನೆ ಮಾಡಿದರೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಾರರು ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ಅಧಿಕಾರ ರಚನೆಗೆ ಮೈತ್ರಿ ಪಕ್ಷಗಳ ಬೆಂಬಲ ಅತ್ಯಗತ್ಯ ಎಂದು ಹೇಳಿರುವ ಶರದ್ ಪವಾರ್, ನರೇಂದ್ರ ಮೋದಿ 2ನೇ ಬಾರಿಗೆ ಪ್ರಧಾನಿಯಾಗಲು ಸಾಧ್ಯವಿಲ್ಲ. ಬಿಜೆಪಿಗೆ ಬೆಂಬಲ ನೀಡುವ ಇತರೆ ಪಕ್ಷಗಳು ನರೇಂದ್ರ ಮೋದಿ ಹೊರತಾಗಿ ಬೇರೆ ನಾಯಕರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟ 326 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಬಿಜೆಪಿ 283 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…