ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಗೆಲುವು ದಾಖಲಿಸಿದರೂ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗುವುದಿಲ್ಲ ಎಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಈ ಸಲದ ಲೋಕಸಭಾ ಚುನಾವಣೆ ಫಲಿತಾಂಶ ಅಚ್ಚರಿ ಉಂಟುಮಾಡಲಿದೆ, ಬಿಜೆಪಿಗೆ ಅಗತ್ಯ ಸಂಖ್ಯಾ ಬಲದ ಕೊರತೆ ಎದುರಾಗಲಿದೆ, ಒಂದು ವೇಳೆ ಬಿಜೆಪಿ ಇತರೆ ಪಕ್ಷಗಳ ಸಹಕಾರದೊಂದಿಗೆ ಸರ್ಕಾರ ರಚನೆ ಮಾಡಿದರೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಾರರು ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ಅಧಿಕಾರ ರಚನೆಗೆ ಮೈತ್ರಿ ಪಕ್ಷಗಳ ಬೆಂಬಲ ಅತ್ಯಗತ್ಯ ಎಂದು ಹೇಳಿರುವ ಶರದ್ ಪವಾರ್, ನರೇಂದ್ರ ಮೋದಿ 2ನೇ ಬಾರಿಗೆ ಪ್ರಧಾನಿಯಾಗಲು ಸಾಧ್ಯವಿಲ್ಲ. ಬಿಜೆಪಿಗೆ ಬೆಂಬಲ ನೀಡುವ ಇತರೆ ಪಕ್ಷಗಳು ನರೇಂದ್ರ ಮೋದಿ ಹೊರತಾಗಿ ಬೇರೆ ನಾಯಕರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟ 326 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಬಿಜೆಪಿ 283 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿತ್ತು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…