ಚೆನ್ನೈ, : ಮುಂಬರುವ ಲೋಕಸಭೆ ಚುನಾವಣೆಗೆ ಎಐಎಡಿಎಂಕೆ ಹಾಗೂ ಬಿಜೆಪಿ ಮಧ್ಯೆ ಮೈತ್ರಿಯು ತಮಿಳುನಾಡಿನಲ್ಲಿ ಅಂತಿಮಗೊಂಡ ಮರು ದಿನ ಬುಧವಾರದಂದು ಡಿಎಂಕೆ ಹಾಗೂ ಕಾಂಗ್ರೆಸ್ ಮೈತ್ರಿ ಒಪ್ಪಂದಕ್ಕೆ ಬಂದಿವೆ. ಚೆನ್ನೈನಲ್ಲಿ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಒಟ್ಟು 40 ಲೋಕಸಭಾ ಕ್ಷೇತ್ರಗಳ ಪೈಕಿ ತಮಿಳುನಾಡಿನಲ್ಲಿ 39 ಹಾಗೂ ಪುದುಚೆರಿಯಲ್ಲಿ 1 ಸ್ಥಾನವಿದೆ. ಅದರಲ್ಲಿ ಡಿಎಂಕೆ 25ರಿಂದ 28 ಸ್ಥಾನಗಳಲ್ಲಿ ಸ್ಪರ್ಧಿಸುವ ಭರವಸೆ ಇದೆ. ಕಾಂಗ್ರೆಸ್ 16 ಸ್ಥಾನಗಳಲ್ಲಿ ಸ್ಪರ್ಧೆ ಮಾಡುವ ಆಶಯ ವ್ಯಕ್ತಪಡಿಸಿದೆ.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್, ನಾವು ಕಾಂಗ್ರೆಸ್ ಬಳಿ ಮತ್ತೊಮ್ಮೆ ಚರ್ಚಿಸಿದ ಬಳಿಕ ಸೀಟು ಹಂಚಿಕೆ ಬಗೆಗಿನ ಮಾಹಿತಿ ನೀಡಲಿದ್ದೇವೆ. ಇನ್ನು ಸೀಟು ಹಂಚಿಕೆ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಕಾಂಗ್ರೆಸ್ 16 ಸೀಟುಗಳಿಗೆ ಬೇಡಿಕೆಯಿಟ್ಟಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆಗೆ ಒಂದು ಸುತ್ತಿನ ಮಾತುಕತೆ ನಡೆಸುತ್ತೇವೆ. ನಂತರ ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರ? ಎಲ್ಲಿಂದ ಯಾರು ಕಣಕ್ಕಿಳಿಯಲಿದ್ಧಾರೆ? ಎಂಬುದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಲಿದ್ದೇವೆ ಎಂದರು.
ಇನ್ನು ಕಾಂಗ್ರೆಸ್ ಜತೆಗೆ ಎಡ ಪಕ್ಷಗಳೊಂದಿಗೂ ಡಿಎಂಕೆ ಮಾತುಕತೆ ನಡೆಸುತ್ತಿದೆ. ಎಂಡಿಎಂಕೆ, ವಿಸಿಕೆ ದಲಿತ ಪಕ್ಷ, ಐಯುಎಂಎಲ್ ಮುಸ್ಲಿಂ ಪಕ್ಷದ ಜೊತೆಗೂ ಮಾತುಕತೆ ನಡೆಸುತ್ತಿದ್ದೇವೆ. ಎಲ್ಲರನ್ನು ಒಟ್ಟಿಗೆ ಸೇರಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಚಿಂತಿಸಲಾಗಿದೆ. ಕನಿಷ್ಠ 25 ಕ್ಷೇತ್ರಗಳಿಂದ ನಮ್ಮ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು, ಉಳಿದ ಕ್ಷೇತ್ರಗಳಲ್ಲಿ ಇತರ ಮೈತ್ರಿ ಪಕ್ಷಗಳ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ನಿರ್ಧರಿಸಿದ್ದೇವೆ ಎಂದು ಹಿರಿಯ ಡಿಎಂಕೆ ನಾಯಕರು ತಿಳಿಸಿದ್ಧಾರೆ.
39 ಲೋಕಸಭಾ ಕ್ಷೇತ್ರಗಳ ಪೈಕಿ 5 ರಲ್ಲಿ ಬಿಜೆಪಿ ಕಣಕ್ಕಿಳಿಯಲಿದೆ. ಉಳಿದ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…