ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಪ್ರಕಾಶ್ ರಾಜ್ ಅವರಿಗೆ ಆಮ್ಆದ್ಮಿ ಪಕ್ಷ ಬೆಂಬಲ ಸೂಚಿಸಿದೆ.
ಬೆಂಗಳೂರು ಆಮ್ಆದ್ಮಿ ಪಕ್ಷದ ನಾಯಕರು ಜೈನ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಲು ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಕಾಶ್, ಉತ್ತರಿಸಲು ಕಾಲ ಮುಗಿಯಿತು ಇದೀಗ ಲೋಕಸಭೆಯಲ್ಲಿ ಪ್ರಶ್ನಿಸುವ ಕಾಲ ಸನ್ನಿಹಿತವಾಗುತ್ತಿದೆ. ನಾನು ಈಗಾಗಲೇ ಘೋಷಿಸಿರುವಂತೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆಮ್ಆದ್ಮಿ ಪಕ್ಷದ ಬೆಂಬಲ ದೊರೆತಿರುವುದು ಸಂತಸದ ವಿಚಾರ ಎಂದು ಹೇಳಿದರು.
ಬೇರೆ ಪಕ್ಷಗಳು 70 ವರ್ಷಗಳಿಂದ ಮಾಡದೆ ಇರುವ ಕೆಲಸವನ್ನು ಆಮ್ಆದ್ಮಿ ಪಕ್ಷ ದೆಹಲಿಯಲ್ಲಿ ಮಾಡಿ ತೋರಿಸಿದೆ. ನಾಗರಿಕರು ಮನಸ್ಸು ಮಾಡಿದರೆ ಪ್ರಪಂಚವನ್ನೇ ಬದಲಾಯಿಸಬಹುದು ಎನ್ನುವುದಕ್ಕೆ ಆಮ್ ಆದ್ಮಿ ಪಕ್ಷ ನಿದರ್ಶನವಾಗಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಪ್ರಕಾಶ್ ರಾಜ್ ಅವರಿಗೆ ನಮ್ಮ ಬೆಂಬಲವಿದೆ, ಅವರು ಎಂದಿಗೂ ಸತ್ಯದ ಪರವಾಗಿ ಹಾಗೂ ಅನ್ಯಾಯ ವಿರುದ್ಧವಾಗಿ ಧ್ವನಿಯೆತ್ತಿದವರು. ಅವರ ಪರವಾಗಿ ಪ್ರಚಾರವನ್ನೂ ಕೂಡ ಮಾಡುತ್ತೇವೆ. ಹಾಗೆಯೇ 2020ರ ಬಿಬಿಎಂಪಿ ಚುನಾವಣೆಯಲ್ಲಿ ಕೂಡ ಆಮ್ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…