ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಪ್ರಕಾಶ್ ರಾಜ್ ಅವರಿಗೆ ಆಮ್ಆದ್ಮಿ ಪಕ್ಷ ಬೆಂಬಲ ಸೂಚಿಸಿದೆ.
ಬೆಂಗಳೂರು ಆಮ್ಆದ್ಮಿ ಪಕ್ಷದ ನಾಯಕರು ಜೈನ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಲು ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಕಾಶ್, ಉತ್ತರಿಸಲು ಕಾಲ ಮುಗಿಯಿತು ಇದೀಗ ಲೋಕಸಭೆಯಲ್ಲಿ ಪ್ರಶ್ನಿಸುವ ಕಾಲ ಸನ್ನಿಹಿತವಾಗುತ್ತಿದೆ. ನಾನು ಈಗಾಗಲೇ ಘೋಷಿಸಿರುವಂತೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆಮ್ಆದ್ಮಿ ಪಕ್ಷದ ಬೆಂಬಲ ದೊರೆತಿರುವುದು ಸಂತಸದ ವಿಚಾರ ಎಂದು ಹೇಳಿದರು.
ಬೇರೆ ಪಕ್ಷಗಳು 70 ವರ್ಷಗಳಿಂದ ಮಾಡದೆ ಇರುವ ಕೆಲಸವನ್ನು ಆಮ್ಆದ್ಮಿ ಪಕ್ಷ ದೆಹಲಿಯಲ್ಲಿ ಮಾಡಿ ತೋರಿಸಿದೆ. ನಾಗರಿಕರು ಮನಸ್ಸು ಮಾಡಿದರೆ ಪ್ರಪಂಚವನ್ನೇ ಬದಲಾಯಿಸಬಹುದು ಎನ್ನುವುದಕ್ಕೆ ಆಮ್ ಆದ್ಮಿ ಪಕ್ಷ ನಿದರ್ಶನವಾಗಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಪ್ರಕಾಶ್ ರಾಜ್ ಅವರಿಗೆ ನಮ್ಮ ಬೆಂಬಲವಿದೆ, ಅವರು ಎಂದಿಗೂ ಸತ್ಯದ ಪರವಾಗಿ ಹಾಗೂ ಅನ್ಯಾಯ ವಿರುದ್ಧವಾಗಿ ಧ್ವನಿಯೆತ್ತಿದವರು. ಅವರ ಪರವಾಗಿ ಪ್ರಚಾರವನ್ನೂ ಕೂಡ ಮಾಡುತ್ತೇವೆ. ಹಾಗೆಯೇ 2020ರ ಬಿಬಿಎಂಪಿ ಚುನಾವಣೆಯಲ್ಲಿ ಕೂಡ ಆಮ್ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…