ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಪ್ರಕಾಶ್ ರಾಜ್ ಅವರಿಗೆ ಆಮ್ಆದ್ಮಿ ಪಕ್ಷ ಬೆಂಬಲ ಸೂಚಿಸಿದೆ.
ಬೆಂಗಳೂರು ಆಮ್ಆದ್ಮಿ ಪಕ್ಷದ ನಾಯಕರು ಜೈನ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಲು ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಕಾಶ್, ಉತ್ತರಿಸಲು ಕಾಲ ಮುಗಿಯಿತು ಇದೀಗ ಲೋಕಸಭೆಯಲ್ಲಿ ಪ್ರಶ್ನಿಸುವ ಕಾಲ ಸನ್ನಿಹಿತವಾಗುತ್ತಿದೆ. ನಾನು ಈಗಾಗಲೇ ಘೋಷಿಸಿರುವಂತೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆಮ್ಆದ್ಮಿ ಪಕ್ಷದ ಬೆಂಬಲ ದೊರೆತಿರುವುದು ಸಂತಸದ ವಿಚಾರ ಎಂದು ಹೇಳಿದರು.
ಬೇರೆ ಪಕ್ಷಗಳು 70 ವರ್ಷಗಳಿಂದ ಮಾಡದೆ ಇರುವ ಕೆಲಸವನ್ನು ಆಮ್ಆದ್ಮಿ ಪಕ್ಷ ದೆಹಲಿಯಲ್ಲಿ ಮಾಡಿ ತೋರಿಸಿದೆ. ನಾಗರಿಕರು ಮನಸ್ಸು ಮಾಡಿದರೆ ಪ್ರಪಂಚವನ್ನೇ ಬದಲಾಯಿಸಬಹುದು ಎನ್ನುವುದಕ್ಕೆ ಆಮ್ ಆದ್ಮಿ ಪಕ್ಷ ನಿದರ್ಶನವಾಗಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಪ್ರಕಾಶ್ ರಾಜ್ ಅವರಿಗೆ ನಮ್ಮ ಬೆಂಬಲವಿದೆ, ಅವರು ಎಂದಿಗೂ ಸತ್ಯದ ಪರವಾಗಿ ಹಾಗೂ ಅನ್ಯಾಯ ವಿರುದ್ಧವಾಗಿ ಧ್ವನಿಯೆತ್ತಿದವರು. ಅವರ ಪರವಾಗಿ ಪ್ರಚಾರವನ್ನೂ ಕೂಡ ಮಾಡುತ್ತೇವೆ. ಹಾಗೆಯೇ 2020ರ ಬಿಬಿಎಂಪಿ ಚುನಾವಣೆಯಲ್ಲಿ ಕೂಡ ಆಮ್ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…