ಮಂಗಳೂರು: ಇಷ್ಟು ದಿನ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿಕೆ ನೀಡುತ್ತಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಇದೀಗ ಲೋಕಸಭೆ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ನಾನು ವಿರೋಧ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ. ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯದ ಮಟ್ಟಿಗಂತೂ ವದಂತಿಯಷ್ಟೆ ಎಂದು ಹೇಳಿದ್ದಾರೆ.
2014, 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024ರಲ್ಲೂ ಅಂಥದ್ದೊಂದು ವದಂತಿ ಹರಡಿದೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ, ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನು ಸ್ವಲ್ಪ ಸಡಿಲ ಮಾಡುತ್ತೇನೆ. ಹಾಗೆ ಆಗಬೇಕು ಎಂದು ಏನಾದರೂ ಭಗವಂತನ ಇಚ್ಛೆ ಇದ್ದರೆ ಅದು ಆಗಿಯೇ ಆಗುತ್ತದೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ. ನಾನೂ ಸಂಪರ್ಕ ಮಾಡಿಲ್ಲ ಎಂದು ಸೂಲಿಬೆಲೆ ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…