ಬೆಂಗಳೂರು: ಭ್ರಷ್ಟಾಚಾರ ಯಾರೇ ತಪ್ಪು ಮಾಡಿದ್ದರು, ಅವರಿಗೆ ಶಿಕ್ಷೆಯಾಗಲಿ, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ನ್ಯಾಯಾಸಮ್ಮತವಾಗಿ ತನಿಖೆಯಾಗಲಿ ಅಂಥ ಸಿಎಂ ಬಸವರಾಜ ಬೊಮ್ಮಾಯಿವರು ತಿಳಿಸಿದರು.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಶಾಸಕರ ಪುತ್ರನ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ, ನಾವು ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಎಸಿಬಿ ರಚಿಸಿ ಲೋಕಾಯುಕ್ತ ಹಲ್ಲು ಕೀಳುವ ಪ್ರಯತ್ನ ನಾವು ಮಾಡಿಲ್ಲ, ಅದನ್ನು ಮಾಡಿರುವುದು ಕಾಂಗ್ರೆಸ್. ಲೋಕಾಯುಕ್ತಕ್ಕೆ ಸಂಪೂರ್ಣ ಮುಕ್ತ ಅಧಿಕಾರ ನೀಡುವ ಮರು ಆದೇಶ ನೀಡಿ ಲೋಕಾಯುಕ್ತವನ್ನು ಮರುಸ್ಥಾಪಿಸಿದ್ದೇ ಬಿಜೆಪಿ ಸರ್ಕಾರ. ಲೋಕಾಯುಕ್ತ ಇರುವುದೇ ಇಂತಹ ಭ್ರಷ್ಟಾಚಾರ ನಿಗ್ರಹಕ್ಕೆ, ಅದು ಸರ್ವಸ್ವತಂತ್ರವಾಗಿದೆ. ಲೋಕಾಯುಕ್ತ ಮುಕ್ತವಾಗಿ ಸಮಗ್ರ ತನಿಖೆ ನಡೆಸಲಿ, ಮುಕ್ತವಾಗಿ ತನಿಖೆ ನಡೆದು ಹಣ ಯಾರಿಗೆ ಸೇರಿದೆ ಎನ್ನುವ ಮಾಹಿತಿ ಹೊರಗೆ ಬರಲಿ, ಸತ್ಯ ಜನರಿಗೆ ತಿಳಿದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ಹಿಂದೆ ಕಾಂಗ್ರೆಸ್ ಸರ್ಕಾರದ ಅಧಿಕಾರವಧಿಯಲ್ಲಿ ಇಂತಹ ಹತ್ತಾರು ಪ್ರಕರಣಗಳು ನಡೆದಿವೆ ಮತ್ತು ಅಲ್ಲಲ್ಲೇ ಮುಚ್ಚಿಹೋಗಿವೆ. ಇಂದು ಬಿಜೆಪಿ ವಿರುದ್ಧ ಇನ್ನಿಲ್ಲದ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಅಂದು ಎಸಿಬಿ ರಚಿಸಿ ಇಂತಹ ಪ್ರಕರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇ ಕಾಂಗ್ರೆಸ್ ನವರು, ಹೀಗಾಗಿ ಇಂದು ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗೆಲ್ಲಿದೆ ಎಂದು ಕೇಳಿದರು.
ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್ ಸೊರಕೆ ಉಡುಪಿ:…
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…