Featured

ಲೋಕ ಕಲ್ಯಾಣಾರ್ಥ ಮತ್ತು ಸಾನ್ನಿಧ್ಯ ವೃದ್ಧಿಗಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞ ಕಾರ್ಯಕ್ರಮ – vishwanews24

ಲೋಕ ಕಲ್ಯಾಣಾರ್ಥ ಮತ್ತು ಸಾನ್ನಿಧ್ಯ ವೃದ್ಧಿಗಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನವದುರ್ಗಾ ಲೇಖನ ಯಜ್ಞ ಕಾರ್ಯಕ್ರಮ

ಕಾಪು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಮತ್ತು ಸಾನ್ನಿಧ್ಯ ವೃದ್ಧಿಗಾಗಿ ನವದುರ್ಗೆಯರ ಹೆಸರಿನೊಂದಿಗೆ ಕಾಪುವಿನ ಅಮ್ಮನ ಹೆಸರನ್ನು ಬರೆಯುವ ನವದುರ್ಗಾ ಲೇಖನ ಯಜ್ಞ ಮಹಾಸಂಕಲಕ್ಕೆ ಶುಕ್ರವಾರ (ಅ.18) ನವ ದಂಪತಿಗಳಿಂದ ನವದುರ್ಗಾ ನಾಮಜಪ ಪಠಣಾರಂಭ ಕಾರ್ಯಕ್ರಮ ಜರುಗಿತು.

ಕ್ಷೇತ್ರದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರ ಗುರು ತಂತ್ರಿ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಉಪಸ್ಥಿತಿಯಲ್ಲಿ ಒಂಬತ್ತು ದಂಪತಿಗಳು ಏಕಕಾಲದಲ್ಲಿ ದೀಪ ಬೆಳಗಿ ಪುಷ್ಪಾರ್ಚನೆ ಯೊಂದಿಗೆ ನವದುರ್ಗಾ ನಾಮ ಜಪ ಪಠಣೆ ಪ್ರಾರಂಭಿಸಿದರು. ಪ್ರಾರ್ಥನೆ ನೆರವೇರಿಸಿ ಮಾತನಾಡಿದ ದೇವಳದ ತಂತ್ರಿ, ಶರನ್ನವರಾತ್ರಿ ಮಹೋ ತ್ಸವದ 9ನೇ ದಿನ ಮತ್ತು ಕ್ಷೇತ್ರದಲ್ಲಿ ವಾಗೀಶ್ವರಿ ಮಾತೆಗೆ ನಡೆಯುವ ಪೂಜೆಯಂದೇ ನವ ದಂಪತಿಗಳ ಜತೆಗೆ ಪದಾಧಿಕಾರಿಗಳು, ಸಿಬ್ಬಂದಿ ಮತ್ತು ಭಕ್ತರ ಸಮಕ್ಷಮದಲ್ಲಿ ನವದುರ್ಗಾ ನಾಮ ಜಪ ಪಠಣೆ ಮಾಡಲಾಗಿದೆ, ಅ.28ರ ವರೆಗೆ ನಿತ್ಯ ನಿರಂತರವಾಗಿ ತಾಯಿಯ ಹೆಸರನ್ನು ಪಠಣೆ ಮಾಡಿದರೆ, ಬರೆಯಲು ಅನುಕೂಲವಾಗುತ್ತದೆ ಎಂದರು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಕೋಶಾಧಿಕಾರಿ ಮತ್ತು ದೇವಳದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಮಹಾದಾನಿಗಳು ಮತ್ತು ಆರ್ಗಾನಿಕ್ ಇಂಡಸ್ಟ್ರೀಸ್‌ ಆಡಳಿತ ನಿರ್ದೇಶಕ ಆನಂದ ಎಂ.ಶೆಟ್ಟಿ ತೋನ್ಸೆ, ಮುಂಬಯಿಯ ನ್ಯಾಯವಾದಿ ಮಹೇಶ್ ಕೋಟ್ಯಾನ್, ಸಾಯಿ ರಾಧಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮನೋಹ‌ರ್ ಎಸ್. ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ಎಸ್‌ಕೆಎಫ್ ಸಂಸ್ಥೆಯ ಆಡಳಿತ ಆಚಾರ್ಯ ನಿರ್ದೇಶಕ ರಾಮಕೃಷ್ಣ ಮೂಡುಬಿದಿರೆ, ದೇವಸ್ಥಾನದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಸಹಿತ 9 ಜನ ದಂಪತಿ ಸಮೇತರಾಗಿ ದೀಪ ಬೆಳಗಿಸಿ ನವದುರ್ಗಾ ನಾಮಜಪ ಪ್ರಾರಂಭಿಸಿದರು. ಉಪಾಧ್ಯಕ್ಷ ಮಾಧವ ಆರ್. ಪಾಲನ್, ನವದುರ್ಗಾ ಲೇಖನ ಯಜ್ಞ ಸಮಿತಿ ಕೋಶಾಧಿಕಾರಿ ಕೆ. ವಿಶ್ವನಾಥ್, ಆರ್ಥಿಕ ಸಮಿತಿ ಮುಖ್ಯ ಸಂಚಾಲಕ ರತ್ನಾಕರ ಹೆಗ್ಡೆ ಕಲ್ಯಾ ಬೀಡು ಮತ್ತು ರಮೇಶ್ ಶೆಟ್ಟಿ ಕಾಪು ಕೊಲ್ಯ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

1 hour ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

1 hour ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago