Featured

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್​ಐಆರ್ ದಾಖಲು – vishwanews24

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್​ಐಆರ್ ದಾಖಲು

ಬೆಂಗಳೂರು: ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ವಂಚನೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ಸಾಲ ಮರಳಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ಹಿಮಾನ್ವಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಲಾಗಿದೆ.

ದೂರಿನ ಸಾರಾಂಶದಂತೆ, 2019 ರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಹಿಮಾನ್ವಿಗೆ, ವಿಸ್ಮಯ ಗೌಡ ಪರಿಚಯವಾಗಿದ್ದರು. ತಾನು ಸಿನಿಮಾ ನಿರ್ದೇಶಕಿ ಹಾಗೂ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂ ನಲ್ಲಿ ಲೈಫ್ ಕೋಚರ್ ಆಗಿರುವುದಾಗಿ ಹೇಳಿಕೊಂಡಿದ್ದರು. ಪಿರ್ಯಾದುದಾರರು ಈಕೆಯ ಬಗ್ಗೆ ತಿಳಿದುಕೊಂಡು ಆರೋಪಿತೆಯ ಬಳಿ ಕೆಲವು ಬಾರಿ ಮ್ಯಾನಿಫೆಸ್ಟೇಶನ್ ಕ್ಲಾಸಸ್ ತೆಗೆದುಕೊಂಡಿದ್ದು ಆರೋಪಿತೆ ಕೆಲವು ಬಾರಿ ನಮ್ಮ ಕ್ಲಿನಿಕ್ಕೆ ಭೇಟಿ ನೀಡುತ್ತಿದ್ದು ಫೆಬ್ರವರಿ 2024 ರಲ್ಲಿ ವಿಸ್ಮಯಗೌಡ, ಹಿಮಾನ್ವಿ ಮನೆಗೆ ಭೇಟಿ ನೀಡಿದಾಗ ತನಗೆ ಹಣಕಾಸಿನ ತೊಂದರೆ ಇದ್ದು ಹಣ ನೀಡುವಂತೆ ಕೇಳಿಕೊಂಡಿದ್ದರು. ಆಗ ಹಿಮಾನ್ವಿ ಆರೋಪಿತೆಗೆ ತಮ್ಮ ತಾಯಿಯ ಖಾತೆಯಿಂದ ಪಡೆದ 5,00,000 ರೂ ಹಣವನ್ನು ಮತ್ತು ತನ್ನ ಉಳಿತಾಯ ಖಾತೆಯಲ್ಲಿದ್ದ 1,50,000 ರೂಗಳನ್ನು ಸೇರಿ ಒಟ್ಟು 6,50,000 ರೂ ಗಳನ್ನು ನೀಡಿದ್ದರು. ಆ ನಂತರ ಆರೋಪಿತೆ ಶ್ರೀಮತಿ ವಿಸ್ಮಯಗೌಡ ರವರು ಪೋಸ್ಟ್ ಡೆಟೆಡ್ ಚೆಕ್ ನಂ-080118 ರ ಮೂಲಕ 6,50,000 ರೂ ಗಳನ್ನು ವಿಸ್ಮಯ ಗೌಡ, ಹಿಮಾನ್ವಿಗೆ ನೀಡಿದ್ದರು.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago