ಬೆಂಗಳೂರು: ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ವಂಚನೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ಸಾಲ ಮರಳಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ಹಿಮಾನ್ವಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಎಫ್ಐಆರ್ ದಾಖಲಿಸಲಾಗಿದೆ.
ದೂರಿನ ಸಾರಾಂಶದಂತೆ, 2019 ರಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಹಿಮಾನ್ವಿಗೆ, ವಿಸ್ಮಯ ಗೌಡ ಪರಿಚಯವಾಗಿದ್ದರು. ತಾನು ಸಿನಿಮಾ ನಿರ್ದೇಶಕಿ ಹಾಗೂ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಲೈಫ್ ಕೋಚರ್ ಆಗಿರುವುದಾಗಿ ಹೇಳಿಕೊಂಡಿದ್ದರು. ಪಿರ್ಯಾದುದಾರರು ಈಕೆಯ ಬಗ್ಗೆ ತಿಳಿದುಕೊಂಡು ಆರೋಪಿತೆಯ ಬಳಿ ಕೆಲವು ಬಾರಿ ಮ್ಯಾನಿಫೆಸ್ಟೇಶನ್ ಕ್ಲಾಸಸ್ ತೆಗೆದುಕೊಂಡಿದ್ದು ಆರೋಪಿತೆ ಕೆಲವು ಬಾರಿ ನಮ್ಮ ಕ್ಲಿನಿಕ್ಕೆ ಭೇಟಿ ನೀಡುತ್ತಿದ್ದು ಫೆಬ್ರವರಿ 2024 ರಲ್ಲಿ ವಿಸ್ಮಯಗೌಡ, ಹಿಮಾನ್ವಿ ಮನೆಗೆ ಭೇಟಿ ನೀಡಿದಾಗ ತನಗೆ ಹಣಕಾಸಿನ ತೊಂದರೆ ಇದ್ದು ಹಣ ನೀಡುವಂತೆ ಕೇಳಿಕೊಂಡಿದ್ದರು. ಆಗ ಹಿಮಾನ್ವಿ ಆರೋಪಿತೆಗೆ ತಮ್ಮ ತಾಯಿಯ ಖಾತೆಯಿಂದ ಪಡೆದ 5,00,000 ರೂ ಹಣವನ್ನು ಮತ್ತು ತನ್ನ ಉಳಿತಾಯ ಖಾತೆಯಲ್ಲಿದ್ದ 1,50,000 ರೂಗಳನ್ನು ಸೇರಿ ಒಟ್ಟು 6,50,000 ರೂ ಗಳನ್ನು ನೀಡಿದ್ದರು. ಆ ನಂತರ ಆರೋಪಿತೆ ಶ್ರೀಮತಿ ವಿಸ್ಮಯಗೌಡ ರವರು ಪೋಸ್ಟ್ ಡೆಟೆಡ್ ಚೆಕ್ ನಂ-080118 ರ ಮೂಲಕ 6,50,000 ರೂ ಗಳನ್ನು ವಿಸ್ಮಯ ಗೌಡ, ಹಿಮಾನ್ವಿಗೆ ನೀಡಿದ್ದರು.
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…