ಬೆಂಗಳೂರು : ಉದ್ಯಮಿಗೆ ಚುನಾವಣಾ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂ.ಪಡೆದು ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ವ್ಯಕ್ತಿಯೊಬ್ಬರು ದಾವೆ ಹೂಡಿದ್ದಾರೆ.
ಕುಂದಾಪುರ ಮೂಲದ ಗಣೇಶ್ ಶೆಟ್ಟಿ ಮೂಲ ದಾವೆ ಹೂಡಿದ್ದಾರೆ. ದಾವೆಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದೆ. ಕದಂಬರು, ಚಾಲುಕ್ಯ, ಹೊಯ್ಸಳ, ವಿಜಯನಗರ ಅರಸರು ಕುಂದಾಪುರ ಪಟ್ಟಣದ ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ದಾವೆಯಲ್ಲಿ ವಿವರಿಸಲಾಗಿದೆ.
ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರಾ ಹೆಸರು ಬಳುಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಧಕ್ಕೆಯಾಗುತ್ತಿದೆ.ಕುಂದಾಪುರ ಎಂದು ಉಲ್ಲೇಖಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿದೆ.
ಚೈತ್ರಾ ಬಗ್ಗೆ ಸುದ್ದಿ ಪ್ರಸಾರ ಮಾಡುವಾಗ ಕುಂದಾಪುರ ಎಂದು ಉಲ್ಲೇಖಿಸದಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಮಾಡಬೇಕು. ಈಗಾಗಲೇ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್, ಲಿಂಕ್ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕು ಎಂದು ದಾವೆದಾರ ಕೋರಿದ್ದಾರೆ. ದಾವೆದಾರ ಪರ ವಕೀಲ ಪವನ ಚಂದ್ರ ಶೆಟ್ಟಿ ವಕಾಲತ್ತು ಹಾಕಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…