Featured

ವಂಚನೆ ಪ್ರಕರಣ : ಅನಿಲ್‌ ಅಂಬಾನಿಗೆ ಸೇರಿದ ಹಲವು ಕಂಪನಿಗಳ ಮೇಲೆ ED ದಾಳಿ – vishwanews24

ವಂಚನೆ ಪ್ರಕರಣ : ಅನಿಲ್‌ ಅಂಬಾನಿಗೆ ಸೇರಿದ ಹಲವು ಕಂಪನಿಗಳ ಮೇಲೆ ED ದಾಳಿ

ಮುಂಬೈ: ಯೆಸ್ ಬ್ಯಾಂಕ್‌ಗೆ 3,000 ಕೋಟಿ ಸಾಲ ವಂಚನೆ ಪ್ರಕರಣಕ್ಕೆ  ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿ  ಮಾಲೀಕತ್ವದ ರಿಲಯನ್ಸ್ ಗ್ರೂಪ್​ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ಮಾಡಿದೆ.

ಸುಮಾರು 35ಕ್ಕೂ ಹೆಚ್ಚು ಸ್ಥಳಗಳು, ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ (RAAGA)ನ 50 ಕಂಪನಿಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ದಾಳಿ ನಡೆಸಿರುವುದಾಗಿ ರೆಡ್‌ಬಾಕ್ಸ್ ಗ್ಲೋಬಲ್ ಇಂಡಿಯಾ X ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಯೆಸ್‌ ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ್ದ 2 ಎಫ್‌ಐಆರ್‌ಗಳನ್ನು ಆಧರಿಸಿ ಹಾಗೂ ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮತ್ತಿತರ ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ತೀವ್ರ ಶೋಧ ನಡೆಸುತ್ತಿದೆ. 25ಕ್ಕೂ ಹೆಚ್ಚು ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್‌ ಬ್ಯಾಂಕ್‌ 3,000 ಕೋಟಿ ರೂ. ಸಾಲ ನೀಡಿತ್ತು. ಆದ್ರೆ ಈ ಸಾಲದ ಹಣವನ್ನ ಗ್ರೂಪ್‌ನ ಇತರ ಶೆಲ್‌ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಪತ್ತೆಹಚ್ಚಿದೆ. ಪ್ರಾಥಮಿಕ ತನಿಖೆಯಲ್ಲಿ ಇದಕ್ಕೆ ಸಾಕ್ಷ್ಯಾಧಾರಗಳೂ ಸಿಕ್ಕಿವೆ ಅಂತ ಇಡಿ ಹೇಳಿದೆ.

ಸಾಲ ಅನುಮೋದನೆ ವಿಚಾರದಲ್ಲಿ ಯೆಸ್ ಬ್ಯಾಂಕ್ ಪ್ರಕ್ರಿಯೆ ಅನುಮಾನಾಸ್ಪದವಾಗಿದೆ. ಸರಿಯಾದ ಹಣಕಾಸು ಸ್ಥಿತಿ ಇಲ್ಲದ ಕಂಪನಿಗಳು, ಸಾಮಾನ್ಯ ನಿರ್ದೇಶಕರಿರುವ ಕಂಪನಿಗಳಿಗೆ ಸಾಲ ಮಂಜೂರು ಮಾಡಲಾಗಿದೆ. ಸರಿಯಾಗಿ ಅವಲೋಕನ ಮಾಡುವ ಪ್ರಯತ್ನ ಆಗಿಲ್ಲ. ಸಾಲಕ್ಕೆ ಅನುಮೋದನೆ ಆಗುವ ಮುನ್ನವೇ ಅಥವಾ ಅದೇ ದಿನವೇ ಸಾಲದ ಹಣ ಬಿಡುಗಡೆ ಮಾಡಲಾಗಿದೆ ಎಂದು ಯೆಸ್ ಬ್ಯಾಂಕ್​ನ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಇಡಿ ಎತ್ತಿ ತೋರಿಸಿದೆ. ಇಡಿ ನೀಡಿರುವ ಮಾಹಿತಿ ಪ್ರಕಾರ ರಿಲಯನ್ಸ್ ಗ್ರೂಪ್​ಗೆ ಸೇರಿದ 50 ಕಂಪನಿಗಳ ಮೇಲೆ ಇಡಿ ದಾಳಿ ನಡೆಸಿದ್ದು ಶೋಧ ಆರಂಭಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago