Featured

ವಂಚನೆ ಪ್ರಕರಣ : ಅನಿಲ್‌ ಅಂಬಾನಿಗೆ ಸೇರಿದ ಹಲವು ಕಂಪನಿಗಳ ಮೇಲೆ ED ದಾಳಿ – vishwanews24

ವಂಚನೆ ಪ್ರಕರಣ : ಅನಿಲ್‌ ಅಂಬಾನಿಗೆ ಸೇರಿದ ಹಲವು ಕಂಪನಿಗಳ ಮೇಲೆ ED ದಾಳಿ

ಮುಂಬೈ: ಯೆಸ್ ಬ್ಯಾಂಕ್‌ಗೆ 3,000 ಕೋಟಿ ಸಾಲ ವಂಚನೆ ಪ್ರಕರಣಕ್ಕೆ  ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿ  ಮಾಲೀಕತ್ವದ ರಿಲಯನ್ಸ್ ಗ್ರೂಪ್​ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ಮಾಡಿದೆ.

ಸುಮಾರು 35ಕ್ಕೂ ಹೆಚ್ಚು ಸ್ಥಳಗಳು, ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ (RAAGA)ನ 50 ಕಂಪನಿಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ದಾಳಿ ನಡೆಸಿರುವುದಾಗಿ ರೆಡ್‌ಬಾಕ್ಸ್ ಗ್ಲೋಬಲ್ ಇಂಡಿಯಾ X ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಯೆಸ್‌ ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ್ದ 2 ಎಫ್‌ಐಆರ್‌ಗಳನ್ನು ಆಧರಿಸಿ ಹಾಗೂ ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮತ್ತಿತರ ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ತೀವ್ರ ಶೋಧ ನಡೆಸುತ್ತಿದೆ. 25ಕ್ಕೂ ಹೆಚ್ಚು ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್‌ ಬ್ಯಾಂಕ್‌ 3,000 ಕೋಟಿ ರೂ. ಸಾಲ ನೀಡಿತ್ತು. ಆದ್ರೆ ಈ ಸಾಲದ ಹಣವನ್ನ ಗ್ರೂಪ್‌ನ ಇತರ ಶೆಲ್‌ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಪತ್ತೆಹಚ್ಚಿದೆ. ಪ್ರಾಥಮಿಕ ತನಿಖೆಯಲ್ಲಿ ಇದಕ್ಕೆ ಸಾಕ್ಷ್ಯಾಧಾರಗಳೂ ಸಿಕ್ಕಿವೆ ಅಂತ ಇಡಿ ಹೇಳಿದೆ.

ಸಾಲ ಅನುಮೋದನೆ ವಿಚಾರದಲ್ಲಿ ಯೆಸ್ ಬ್ಯಾಂಕ್ ಪ್ರಕ್ರಿಯೆ ಅನುಮಾನಾಸ್ಪದವಾಗಿದೆ. ಸರಿಯಾದ ಹಣಕಾಸು ಸ್ಥಿತಿ ಇಲ್ಲದ ಕಂಪನಿಗಳು, ಸಾಮಾನ್ಯ ನಿರ್ದೇಶಕರಿರುವ ಕಂಪನಿಗಳಿಗೆ ಸಾಲ ಮಂಜೂರು ಮಾಡಲಾಗಿದೆ. ಸರಿಯಾಗಿ ಅವಲೋಕನ ಮಾಡುವ ಪ್ರಯತ್ನ ಆಗಿಲ್ಲ. ಸಾಲಕ್ಕೆ ಅನುಮೋದನೆ ಆಗುವ ಮುನ್ನವೇ ಅಥವಾ ಅದೇ ದಿನವೇ ಸಾಲದ ಹಣ ಬಿಡುಗಡೆ ಮಾಡಲಾಗಿದೆ ಎಂದು ಯೆಸ್ ಬ್ಯಾಂಕ್​ನ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಇಡಿ ಎತ್ತಿ ತೋರಿಸಿದೆ. ಇಡಿ ನೀಡಿರುವ ಮಾಹಿತಿ ಪ್ರಕಾರ ರಿಲಯನ್ಸ್ ಗ್ರೂಪ್​ಗೆ ಸೇರಿದ 50 ಕಂಪನಿಗಳ ಮೇಲೆ ಇಡಿ ದಾಳಿ ನಡೆಸಿದ್ದು ಶೋಧ ಆರಂಭಿಸಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

14 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

15 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

15 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

17 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

17 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

17 hours ago