ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವ ಆರೋಪ ಕೇಸ್ನ ಆರೋಪಿ ಚೈತ್ರಾ ಬುಧವಾರ (ಡಿ.6) ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವ ಭರವಸೆ ನೀಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ 5 ಕೋಟಿ ರೂ. ಪಡೆದು ವಂಚಿಸಿದ ಆರೋಪದ ಮೇಲೆ ಸೆಪ್ಟೆಂಬರ್ 13 ರಂದು ಚೈತ್ರ ಅವರನ್ನು ಬಂಧಿಸಲಾಗಿತ್ತು.
ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿ ಕೊಂಡಿರುವ ಚೈತ್ರಾ ಸೇರಿದಂತೆ ಚಿಕ್ಕಮಗಳೂರು ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಗಗನ್ ಕಡೂರು, ರಮೇಶ್, ಪ್ರಜ್ವಲ್, ಧನರಾಜ್, ಶ್ರೀಕಾಂತ್, ಹಾಲಶ್ರೀ ಸ್ವಾಮೀಜಿ ಸೇರಿ 9 ಮಂದಿಯನ್ನು ಸಿಸಿಬಿ ತಂಡ, ಉಡುಪಿ ಹಾಗೂ ಇತರ ಕಡೆ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.
ಆರಂಭದಲ್ಲಿ ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ಪಡೆದಿದ್ದರು. ಆ ಬಳಿಕ ಕೋರ್ಟ್ ಎರಡು ತಿಂಗಳು ನ್ಯಾಯಾಂಗ ಬಂಧನಕ್ಕೆ ಸೂಚಿಸಿತ್ತು. ಸೋಮವಾರ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್ ಅವರಿಗೆ ಕೋರ್ಟ್ನಿಂದ ಬೇಲ್ ಸಿಕ್ಕಿತ್ತು. ಸದ್ಯ ಬಿಡುಗಡೆಯಾಗಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…