ಉಡುಪಿ : ಕೋಟ್ಯಾಂತರ ರೂಪಾಯಿ ವಂಚನೆಯ ಆರೋಪಿ ಚೈತ್ರಾ ಕುಂದಾಪುರ ವಿರುದ್ಧ ದಾಖಲಾಗಿರುವ ಇನ್ನೊಂದು ಪ್ರಕರಣದಲ್ಲಿ ಆಕೆಯ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಕೋಟ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.
ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಗಳ ಪಂಗನಾಮ ಹಾಕಿದ ಚೈತ್ರಾ ಇದೀಗ ಬೆಂಗಳೂರು ಸಿಸಿಬಿ ಪೊಲೀಸರ ವಶದಲ್ಲಿದ್ದಾಳೆ. ಆಕೆ ಬ್ರಹ್ಮಾವರ ತಾಲೂಕಿನ ಕೋಡಿಕನ್ಯಾನದ ಯುವಕನಿಗೂ 5 ಲಕ್ಷ ರೂಪಾಯಿ ವಂಚಿಸಿದ ಇನ್ನೊಂದು ಪ್ರಕರಣ ದಾಖಲಾಗಿದ್ದು, ಇದರ ತನಿಖೆಗೆ ಕೋಟ ಠಾಣೆಯ ಪೊಲೀಸರಿಗೆ ಆಕೆ ಬೇಕಾಗಿದ್ದಾಳೆ, ಮೀನು ವ್ಯಾಪಾರ ಮಾಡಿಕೊಂಡಿದ್ದ ಸುದಿನ ಎಂಬಾತನಿಗೆ, ಕೇಸರಿ ಧ್ವಜ, ಬಟ್ಟೆಗಳ ಅಂಗಡಿ ಹಾಕಿಕೊಡುವುದಾಗಿ ನಂಬಿಸಿದ್ದ ಚೈತ್ರಾ ಆತನಿಂದ 2018ರಿ೦ದ 2022ರ ವರೆಗೆ ಹಂತ ಹಂತವಾಗಿ 5 ಲಕ್ಷ ರು. ನಡೆದಿದ್ದಳು ನಂತರ ಮೋಸ ಮಾಡಿದ್ದಾಳೆ, ಹಣ ಹಿಂದಕ್ಕೆ ಕೇಳಿದಾಗ ಜೀವ ಬೆದರಿಕೆ ಹಾಕಿದ್ದಳು ಎಂದು ಇದೀಗ ಸುದಿನ ಅವರು ಕೋಟ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಈ ದೂರಿನ ಹಿನ್ನೆಲೆಯಲ್ಲಿ ಕೋಟ ಠಾಣೆಯ ಪೊಲೀಸರು ಆಕೆಯ ವಿಚಾರಣೆಗೆ ತಮ್ಮ ವಶಕ್ಕೆ ಒಪ್ಪಿಸುವಂತೆ ಉಡುಪಿ ಜಿಲ್ಲಾ ನ್ಯಾಯಾಲಯದ ಮೂಲಕ ಬೆಂಗಳೂರು ಒಂದನೇ ಮುಖ್ಯ ಅಪರ ಮುಖ್ಯ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಬಾಡಿ ವಾರಂಟ್ ಅರ್ಜಿ ಸಲ್ಲಿಸಿದ್ದಾರೆ. ಆದರೆ, ನ್ಯಾಯಾಲಯ ಈಗಾಗಲೇ ಸೆಪ್ಟೆಂಬರ್ 23ರ ವರೆಗೆ ಆಕೆಯನ್ನು ಸಿಸಿಬಿ ಪೊಲೀಸರ ವಶಕ್ಕೆ ನೀಡಿದ್ದು, ಪ್ರಸ್ತುತ ಪೊಲೀಸರಿಂದ ಚೈತ್ರಾಳ ವಿಚಾರಣೆ ಪೂರ್ಣಗೊಂಡಿಲ್ಲ. ಆದ್ದರಿಂದ ಕೋಟ ಠಾಣೆಯ ಪೊಲೀಸರು 23ರಂದು ನ್ಯಾಯಾಲಯ ಆದೇಶಕ್ಕೆ ಕಾಯಬೇಕಾಗಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…