Featured

ವಂಚನೆ ಪ್ರಕರಣ : ಚೈತ್ರಾ ಸೇರಿ 9 ಮಂದಿ ಆರೋಪಿಗಳ ವಿರುದ್ದ ಚಾರ್ಜ್‌‌ಶೀಟ್‌ ಸಲ್ಲಿಕೆ  – vishwanews24

ವಂಚನೆ ಪ್ರಕರಣ : ಚೈತ್ರಾ ಸೇರಿ 9 ಮಂದಿ ಆರೋಪಿಗಳ ವಿರುದ್ದ ಚಾರ್ಜ್‌‌ಶೀಟ್‌ ಸಲ್ಲಿಕೆ

 

ಬೆಂಗಳೂರು : ಟಿಕೆಟ್​ಗೆ ಆಮಿಷವೊಡ್ಡಿ ಉದ್ಯಮಿಯಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ವಂಚನೆ​ ಪ್ರಕರಣ ಸಂಬಂಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 9 ಆರೋಪಿಗಳ ವಿರುದ್ಧ ಸಿಸಿಬಿ ಅಧಿಕಾರಿಗಳು ಚಾರ್ಜ್​​ಶೀಟ್ ಸಲ್ಲಿಸಿದ್ದಾರೆ.

ಚೈತ್ರಾ, ಹಾಲಶ್ರೀ ಸೇರಿ 9 ಮಂದಿ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡು ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್​ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದ ಬಗ್ಗೆ ಸೇರಿದಂತೆ ಸ್ಪಾಟ್ ಮಹಜರ್ ನಡೆಸಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಚೈತ್ರಾ ವಂಚನೆ ಪ್ರಕರಣದಲ್ಲಿ‌ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ರಿಕವರಿ ಮಾಡಲಾಗಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋವನ್ನು ಸಿಸಿಬಿ ಪೊಲೀಸರು ಪಡೆದಿದ್ದಾರೆ. ಗೋವಿಂದ ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಉಲ್ಲೇಖಿಸಲಾಗಿದೆ. ಆರೋಪಿಗಳ ಮೊಬೈಲ್ ಚಾಟ್, ಕರೆಗಳ ಸಂಬಂಧ ಡೇಟಾ ರಿಟ್ರೀವ್ ಮಾಡಿ ವರದಿ ಸಲ್ಲಿಸಲಾಗಿದೆ. ಸದ್ಯ ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago