ಮಂಗಳೂರು, : ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ವಾರ್ಷಿಕ ಪ್ರತಿಷ್ಠಿತ ‘ವಂದನಾ ಪ್ರಶಸ್ತಿ’ಗೆ ಈ ಬಾರಿ ನಟರಾದ ದೇವದಾಸ್ ಕಾಪಿಕಾಡ್ ಹಾಗೂ ನವೀನ್ ಡಿ. ಪಡೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಎ.21ರಂದು ರಾತ್ರಿ 8ಕ್ಕೆ ನಗರದ ಹೋಟೆಲ್ ಕುಡ್ಲ ಸಭಾಂಗಣದಲ್ಲಿ ಜರುಗುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ವಂದನಾ ಪ್ರಶಸ್ತಿ ಆಯ್ಕೆ ಸಮಿತಿಯ ಸಭಾಪತಿ ರೊ.ಡಾ.ಬಿ.ದೇವದಾಸ್ ರೈ ತಿಳಿಸಿದರು.
ಮನಪಾ ಮೇಯರ್ ಕೆ. ಭಾಸ್ಕರ ಮೊಯ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ರೈಮಂಡ್ ಡಿಕುನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ. ರೋ. ಅನಿಲ್ ಗೊನ್ಸಾಲ್ವಿಸ್, ರೊ.ಜಾಕ್ಸನ್ ಸಲ್ಡಾನಾ, ಪವಿತ್ರಾ ಆಚಾರ್ಯ ಭಾಗವಹಿಸಲಿದ್ದಾರೆ ಎಂದರು.
ರೊಟರಿ ಮತ್ತು ರೋಟರ್ಯಾಕ್ಟ್ ಸಂಸ್ಥೆಯ ವಂದನಾ ಪ್ರಶಸ್ತಿಯನ್ನು ಪ್ರತಿ ವರ್ಷ ಕ್ರೀಡೆ, ವಾಣಿಜೋದ್ಯಮ, ಶಿಕ್ಷಣ , ಕಲೆ, ಸಂಗೀತ, ಸಾಹಿತ್ಯ, ವೃತ್ತಿ ಸೇವೆ ಮತ್ತು ಸಮಾಜ ಸೇವೆ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿಕೊಂಡು ಸಾಧಕರನ್ನು ಆಯ್ಕೆ ಮಾಡಲಾಗುತ್ತದೆ ಎಂದರು.
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…