ಮಂಗಳೂರು, : ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ವಾರ್ಷಿಕ ಪ್ರತಿಷ್ಠಿತ ‘ವಂದನಾ ಪ್ರಶಸ್ತಿ’ಗೆ ಈ ಬಾರಿ ನಟರಾದ ದೇವದಾಸ್ ಕಾಪಿಕಾಡ್ ಹಾಗೂ ನವೀನ್ ಡಿ. ಪಡೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಎ.21ರಂದು ರಾತ್ರಿ 8ಕ್ಕೆ ನಗರದ ಹೋಟೆಲ್ ಕುಡ್ಲ ಸಭಾಂಗಣದಲ್ಲಿ ಜರುಗುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ವಂದನಾ ಪ್ರಶಸ್ತಿ ಆಯ್ಕೆ ಸಮಿತಿಯ ಸಭಾಪತಿ ರೊ.ಡಾ.ಬಿ.ದೇವದಾಸ್ ರೈ ತಿಳಿಸಿದರು.
ಮನಪಾ ಮೇಯರ್ ಕೆ. ಭಾಸ್ಕರ ಮೊಯ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ರೋಟರಿ ಮಂಗಳೂರು ಸೆಂಟ್ರಲ್ ಅಧ್ಯಕ್ಷ ರೈಮಂಡ್ ಡಿಕುನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ. ರೋ. ಅನಿಲ್ ಗೊನ್ಸಾಲ್ವಿಸ್, ರೊ.ಜಾಕ್ಸನ್ ಸಲ್ಡಾನಾ, ಪವಿತ್ರಾ ಆಚಾರ್ಯ ಭಾಗವಹಿಸಲಿದ್ದಾರೆ ಎಂದರು.
ರೊಟರಿ ಮತ್ತು ರೋಟರ್ಯಾಕ್ಟ್ ಸಂಸ್ಥೆಯ ವಂದನಾ ಪ್ರಶಸ್ತಿಯನ್ನು ಪ್ರತಿ ವರ್ಷ ಕ್ರೀಡೆ, ವಾಣಿಜೋದ್ಯಮ, ಶಿಕ್ಷಣ , ಕಲೆ, ಸಂಗೀತ, ಸಾಹಿತ್ಯ, ವೃತ್ತಿ ಸೇವೆ ಮತ್ತು ಸಮಾಜ ಸೇವೆ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿಕೊಂಡು ಸಾಧಕರನ್ನು ಆಯ್ಕೆ ಮಾಡಲಾಗುತ್ತದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…