ಭೋಪಾಲ್: ನಾವು ಹೃದಯದಿಂದ ರಾಷ್ಟ್ರವಾದಿಗಳು. ಒಂದು ದಿನ ವಂದೇ ಮಾತರಂ, ರಾಷ್ಟ್ರಗೀತೆ ಹಾಡಿದವರೆಲ್ಲ ದೇಶಪ್ರೇಮಿಗಳಾಗಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.
ಮಧ್ಯಪ್ರದೇಶದ ಸಚಿವಾಲದಲ್ಲಿ ತಿಂಗಳ ಆರಂಭದ ಮೊದಲ ದಿನ ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವ ಪದ್ಧತಿಯನ್ನು ಈ ಹಿಂದೆ ಬಿಜೆಪಿ ಜಾರಿಗೆ ತಂದಿತ್ತು. ಆದರೆ, ಈ ಸಂಪ್ರದಾಯಕ್ಕೆ ಕಾಂಗ್ರೆಸ್ ತಡೆ ನೀಡಿದೆ. “ರಾಷ್ಟ್ರಗೀತೆ ದೇಶಪ್ರೇಮದ ಸಂಕೇತ. ಸಚಿವಾಲಯಗಳಲ್ಲಿ ತಿಂಗಳ ಮೊದಲ ದಿನ ರಾಷ್ಟ್ರಗೀತೆ, ಒಂದೇ ಮಾತರಂ ಹಾಡುವುದನ್ನು ಮತ್ತೆ ಜಾರಿಗೆ ತರಬೇಕು. ನಾವು ಜಾರಿಗೆ ತಂದಿರುವ ಈ ಸತ್ಸಂಪ್ರದಾಯವನ್ನು ಕಾಂಗ್ರೆಸ್ ಮುಂದುವರಿಸಿಕೊಂಡು ಹೋಗಬೇಕು ಎಂದು ನಾನು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ. ವಂದೇ ಮಾತರಂ ಕೇವಲ ಗೀತೆಯಲ್ಲ. ಬದಲಿಗೆ ಅದು ಮಂತ್ರ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ, ರಾಷ್ಟ್ರ ಮೊದಲು ಎಂಬುದನ್ನು ಎಲ್ಲರೂ ಅರಿಯಬೇಕು,” ಎಂದು ಚೌಹಾಣ್ ವಾಗ್ದಾಳಿ ನಡೆಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಕಮಲ್ ನಾಥ್,” ರಾಷ್ಟ್ರಗೀತೆಯ ವಿರುದ್ಧವಾಗಿ ನಡೆದುಕೊಳ್ಳುವ ಅಥವಾ ಅದನ್ನು ಪ್ರತಿಭಟಿಸುವ ಯಾವುದೇ ಉದ್ದೇಶ ಸರ್ಕಾರದ್ದಲ್ಲ. ಹೊಸ ಮಾದರಿಯ ಆದೇಶ ಜಾರಿಗೆ ತರುವ ಉದ್ದೇಶದಿಂದ ಸಚಿವಾಲಯದಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಸದ್ಯಕ್ಕೆ ತಡೆ ನೀಡಿದ್ದೇವೆ. ವಂದೇ ಮಾತರಂ ಹಾಡದವರು ದೇಶಪ್ರೇಮಿಗಳಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ನಾವು ಹೃದಯದಿಂದ ರಾಷ್ಟ್ರವಾದಿಗಳು ಎಂದು ನಂಬಿದ್ದೇವೆ. ವಂದೇ ಮಾತರಂ ಹಾಡಿದ್ದವರೆಲ್ಲ ದೇಶಭಕ್ತರಾಗಲು ಸಾಧ್ಯವಿಲ್ಲ. ದೇಶಪ್ರೇಮವನ್ನು ರಾಷ್ಟ್ರಗೀತೆ ಹಾಡುವ ಮೂಲಕ ಅಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…