Featured

ವಂದೇ ಮಾತರಂ,ರಾಷ್ಟ್ರಗೀತೆ ಹಾಡಿದರಷ್ಟೇ ದೇಶಪ್ರೇಮಿಗಳಲ್ಲ: ಮಧ್ಯಪ್ರದೇಶ ಸಿಎಂ ಕಮಲ್​’ನಾಥ್

ಭೋಪಾಲ್​: ನಾವು ಹೃದಯದಿಂದ ರಾಷ್ಟ್ರವಾದಿಗಳು. ಒಂದು ದಿನ ವಂದೇ ಮಾತರಂ, ರಾಷ್ಟ್ರಗೀತೆ ಹಾಡಿದವರೆಲ್ಲ ದೇಶಪ್ರೇಮಿಗಳಾಗಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್​ ನಾಥ್​ ಹೇಳಿದ್ದಾರೆ.

ಮಧ್ಯಪ್ರದೇಶದ ಸಚಿವಾಲದಲ್ಲಿ ತಿಂಗಳ ಆರಂಭದ ಮೊದಲ ದಿನ ರಾಷ್ಟ್ರಗೀತೆ ಮತ್ತು ವಂದೇ ಮಾತರಂ ಹಾಡುವ ಪದ್ಧತಿಯನ್ನು ಈ ಹಿಂದೆ ಬಿಜೆಪಿ ಜಾರಿಗೆ ತಂದಿತ್ತು. ಆದರೆ, ಈ ಸಂಪ್ರದಾಯಕ್ಕೆ ಕಾಂಗ್ರೆಸ್ ತಡೆ ನೀಡಿದೆ. “ರಾಷ್ಟ್ರಗೀತೆ ದೇಶಪ್ರೇಮದ ಸಂಕೇತ. ಸಚಿವಾಲಯಗಳಲ್ಲಿ ತಿಂಗಳ ಮೊದಲ ದಿನ ರಾಷ್ಟ್ರಗೀತೆ, ಒಂದೇ ಮಾತರಂ ಹಾಡುವುದನ್ನು ಮತ್ತೆ ಜಾರಿಗೆ ತರಬೇಕು. ನಾವು ಜಾರಿಗೆ ತಂದಿರುವ ಈ ಸತ್ಸಂಪ್ರದಾಯವನ್ನು ಕಾಂಗ್ರೆಸ್​ ಮುಂದುವರಿಸಿಕೊಂಡು ಹೋಗಬೇಕು ಎಂದು ನಾನು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ. ವಂದೇ ಮಾತರಂ ಕೇವಲ ಗೀತೆಯಲ್ಲ. ಬದಲಿಗೆ ಅದು ಮಂತ್ರ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ, ರಾಷ್ಟ್ರ ಮೊದಲು ಎಂಬುದನ್ನು ಎಲ್ಲರೂ ಅರಿಯಬೇಕು,” ಎಂದು ಚೌಹಾಣ್​ ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಕಮಲ್​ ನಾಥ್​,” ರಾಷ್ಟ್ರಗೀತೆಯ ವಿರುದ್ಧವಾಗಿ ನಡೆದುಕೊಳ್ಳುವ ಅಥವಾ ಅದನ್ನು ಪ್ರತಿಭಟಿಸುವ ಯಾವುದೇ ಉದ್ದೇಶ ಸರ್ಕಾರದ್ದಲ್ಲ. ಹೊಸ ಮಾದರಿಯ ಆದೇಶ ಜಾರಿಗೆ ತರುವ ಉದ್ದೇಶದಿಂದ ಸಚಿವಾಲಯದಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಸದ್ಯಕ್ಕೆ ತಡೆ ನೀಡಿದ್ದೇವೆ. ವಂದೇ ಮಾತರಂ ಹಾಡದವರು ದೇಶಪ್ರೇಮಿಗಳಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ. ಅಲ್ಲದೆ, ನಾವು ಹೃದಯದಿಂದ ರಾಷ್ಟ್ರವಾದಿಗಳು ಎಂದು ನಂಬಿದ್ದೇವೆ. ವಂದೇ ಮಾತರಂ ಹಾಡಿದ್ದವರೆಲ್ಲ ದೇಶಭಕ್ತರಾಗಲು ಸಾಧ್ಯವಿಲ್ಲ. ದೇಶಪ್ರೇಮವನ್ನು ರಾಷ್ಟ್ರಗೀತೆ ಹಾಡುವ ಮೂಲಕ ಅಳೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago