ಹೊಸದಿಲ್ಲಿ: ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಂಸದೀಯ ಮಂಡಳಿ ಶಿಫಾರಸ್ಸು ಮಾಡಿರುವ ಈ ತಿದ್ದುಪಡಿಯನ್ನು ಮಸೂದೆಗೆ ಸೇರಿಸುವ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ನಡೆಯಲು ಹಾದಿ ಸುಗಮಗೊಂಡಂತಾಗಿದೆ.
ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಹಾಗೂ ಭಾರತೀಯ ಬಂದರು ಮಸೂದೆಯ ಜತೆಗೆ ಕಳೆದ ವಾರ ಈ ಮಸೂದೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ. ಸರ್ಕಾರ ಈ ಮಸೂದೆಯನ್ನು ಆದ್ಯತೆಯ ಪಟ್ಟಿಯಲ್ಲಿ ಸೇರಿಸಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ಮಂಡಿಸಿದ ಬಳಿಕ 2024ರ ಆಗಸ್ಟ್ ನಲ್ಲಿ ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಪರಾಮರ್ಶೆಗೆ ನೀಡಲಾಗಿತ್ತು. ಜಂಟಿ ಸಂಸದೀಯ ಸಮಿತಿಯಲ್ಲಿರುವ ವಿರೋಧ ಪಕ್ಷಗಳಿಗೆ ಸೇರಿದ ಎಲ್ಲ 11 ಮಂದಿ ಸಂಸದರು ವರದಿಗೆ ಆಕ್ಷೇಪ ವ್ಯಕ್ತಪಡಿಸಿದರೂ, ಬಹುಮತದಿಂದ ವರದಿಯನ್ನು ಸಮಿತಿ ಆಂಗೀಕರಿಸಿದೆ. ಈ ಸಂಸದರು ಭಿನ್ನಾಭಿಪ್ರಾಯ ಟಿಪ್ಪಣಿಯನ್ನೂ ನೀಡಿದ್ದಾರೆ.
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…
ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…