ಮಂಗಳೂರು: ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆಗಳು ಬಂದಿವೆ.
ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಬೆದರಿಕೆ ಕರೆ ಬಂದಿದ್ದು, ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಅನ್ವರ್ ಮಾಣಿಪ್ಪಾಡಿ ಅವರು ಸದ್ಯ ಮಂಗಳೂರಿನಲ್ಲಿರುವ ನಿವಾಸದಲ್ಲಿ ವಾಸವಾಗಿದ್ದಾರೆ. ದೂರು ಆಧರಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯ ಮೇಲೆ ಲೋಕಸಭೆಯಲ್ಲಿ ಚರ್ಚೆ ಮಾಡುವ ಸಂದರ್ಭ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ವಿಚಾರ ಕೂಡ ಪ್ರಸ್ತಾಪ ಮಾಡಿದ್ದರು. ಅನ್ವರ್ ಮಾಣಿಪ್ಪಾಡಿ ವರದಿ ಉಲ್ಲೇಖಿಸಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬೆದರಿಕೆ ಕರೆ ಬಂದಿರುವುದು ಚರ್ಚೆಗೆ ಕಾರಣವಾಗಿದೆ.
ಇಂಟರ್ನೆಟ್ ಕರೆ ಮೂಲಕ ನನಗೆ ನಿರಂತರ ಬೆದರಿಕೆ ಬರುತ್ತಾ ಇದೆ. ಹಿಂದಿ, ಮರಾಠಿ, ಇಂಗ್ಲೀಷ್ ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆಗಳು ಬರುತ್ತಾ ಇವೆ. ಇಂಗ್ಲಿಷ್ನಲ್ಲಿ ಕರೆ ಮಾಡಿದ ವ್ಯಕ್ತಿ ನೀವು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ನಿನ್ನ ಸಮುದಾಯ ನಿನ್ನನ್ನು ಬಿಡಲ್ಲ ಎಂದೆಲ್ಲಾ ಹೇಳಿದ್ದಾನೆ. ಆದರೆ ನನ್ನ ಸಮುದಾಯದ ಬಗ್ಗೆ ನನಗೆ ಖುಷಿ ಇದೆ. ಸದ್ಯ ನಾನು ಮಂಗಳೂರು ಕಮಿಷನರ್ ಅನುಪಮ್ ಅಗರವಾಲ್ಗೆ ಮಾಹಿತಿ ಕೊಟ್ಟಿದ್ದೇನೆ. ನಾನು ಈ ಹಿಂದೆಯೂ ಭದ್ರತೆ ಕೊಟ್ಟಾಗ ವಾಪಾಸ್ ಕಳುಹಿಸಿದ್ದೆ. ಈಗ ತಿದ್ದುಪಡಿ ಮಸೂದೆ ಜಾರಿ ಬಳಿಕ ಮತ್ತೆ ಒಂದಷ್ಟು ಕರೆಗಳು ಬರುತ್ತಿವೆ, ಅದು ಸಾಮಾನ್ಯ ಎಂದಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…