ವಿಜಯಪುರ: ವಕ್ಫ್ ಬೋರ್ಡ್ ಕಾಯ್ದೆ ಸಂವಿಧಾನ ವಿರೋಧಿಯಾಗಿದೆ. ಸಂವಿಧಾನ ಉಳಿಸಿ ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವ್ ಆಗಬೇಕು. ವಕ್ಫ್ ಬೋರ್ಡ್ ನಿಂದ ರೈತರು, ಮಠ ಮಾನ್ಯಗಳಿಗೆ ನ್ಯಾಯ ಸಿಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ನಗರದಲ್ಲಿ ಸೋಮವಾರ (ನ.04) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ವಿರೋಧಿಸಿ ಇಂದು ಕಿಸಾನ್ ಸಂಘದ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟದಲ್ಲಿ ಭಾಗಿಯಾಗುವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಜಮೀರ್ ರಾಜ್ಯದ ಎಲ್ಲ ಭೂಮಿ ವಕ್ಫ್ ಅಡಿಯಲ್ಲಿ ತರಲು ಹೊರಟಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾನೂನು ಬಾಹಿರವಾಗಿ ವಕ್ಫ್ ಅದಾಲತ್ ಮಾಡುತ್ತಿದ್ದಾರೆ. ಯಾವ ಕಾನೂನು ಅಡಿ ವಕ್ಫ್ ಅದಾಲತ್ ಮಾಡುತ್ತಿದ್ದಾರೆ? ಲ್ಯಾಂಡ್ ಜಿಹಾದ್ ಗೆ ಜಮೀರ್ ಮುಂದಾಗಿದ್ದಾರೆ. ಇದನ್ನು ಸಹಿಸಲ್ಲ. ನ್ಯಾಯ ಸಿಗುವವರಿಗೂ ನಮ್ಮ ಹೋರಾಟ ನಡೆಯಲಿದೆ. ರೈತರಿಗೆ ನೀಡಿದ್ದ ನೋಟಿಸ್ ರದ್ದು ಮಾಡಬೇಕು. ಪಹಣಿಯಲ್ಲಿ ನಮೂದಾಗಿರುವ ವಕ್ಫ್ ಬೋರ್ಡ್ ಹೆಸರು ತೆಗೆಯಬೇಕು ಎಂದು ಒತ್ತಾಯಿಸಿದರು.
ಉಡುಪಿಯ ಶಿವಳ್ಳಿ ಎಂಬ ಗ್ರಾಮ ಸುಲ್ತಾನಪುರ ಗ್ರಾಮ ಎಂದು ದಿಶಾಂಕ ಆ್ಯಪ್ ನಲ್ಲಿ ತೋರಿಸುತ್ತಿದೆ. ಇದರಿಂದ ಆತಂಕದ ವಾತಾವರಣ ಮನೆ ಮಾಡಿದೆ. ಐತಿಹಾಸಿಕ ಸ್ಮಾರಕಗಳು ಸಹ ವಕ್ಫ್ ಎಂದಾಗಿದೆ. ವಿಜಯಪುರದ ಡಿಸಿ, ಎಸ್ಪಿ ಕಚೇರಿ, ಜಿಲ್ಲಾಸ್ಪತ್ರೆ ಹಾಗೂ ಇತರೆ ದೇವಸ್ಥಾನಗಳು ವಕ್ಫ್ ಎಂದಾಗಿದೆ. ದಾನದ ಮೂಲಕ ವಕ್ಫ್ ಗೆ ಬರಬೇಕು. ಆದರೆ, ಇವೆಲ್ಲಾ ಹೇಗೆ ವಕ್ಫ್ ಎಂದಾದವು ಎಂದು ಪ್ರಶ್ನಿಸಿದರು.
1974ರ ಗೆಜೆಟ್ ನೊಟಿಫಿಕೇಷನ್ ಸಂಪೂರ್ಣ ರದ್ದಾಗಬೇಕು. ಇದು ರದ್ದಾಗುವವರೆಗೂ ಹೋರಾಟ ಮಾಡುತ್ತೇವೆ. ಶಾಸಕ ಯತ್ನಾಳ ನೇತೃತ್ವದಲ್ಲಿ ನಡೆಯುವ ಅಹೋರಾತ್ರಿ ಧರಣಿಯಲ್ಲಿ ನಾನೂ ಭಾಗಿಯಾಗುವೆ. ರಾಜ್ಯದ ಹಲವಾರು ದೇವಸ್ಥಾನಗಳು ವಕ್ಪ್ ಎಂದಾಗಿವೆ. ಇದು ಯಾವ ಷಡ್ಯಂತ್ರ ಎಂದು ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಏನು ಮಾಡಲು ಹೊರಟಿದ್ದೀರಿ? ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಫ್ ಉಲ್ಲೇಖ ಇಲ್ಲ. 1954-55ರಲ್ಲಿ ನೆಹರು ವಕ್ಫ್ ಸೇರಿಸಿದ್ದಾರೆ. ಇಲ್ಲಿ ಜಮೀನು ವಕ್ಫ್ ದ್ದು ಅಲ್ಲ. ಮಠಗಳಿಗೆ ಚಾಲುಕ್ಯರು ಹೊಯ್ಸಳರು, ಕಿತ್ತೂರು ರಾಣಿ ಚೆನ್ನಮ್ಮ ಇಲ್ಲಿನ ಜಮೀನು ಕೊಟ್ಟದ್ದು, ಇಂಥವನ್ನೂ ವಕ್ಫ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೇ, ಷರಿಯತ್ ಕಾನೂನನ್ನು ರಾಜ್ಯದಲ್ಲಿ ತರಲು ಸಿದ್ದರಾಮಯ್ಯ ಹಾಗೂ ಜಮೀರ್ ಹೊರಟಿದ್ದಾರೆ ಎಂದು ಆರೋಪಿಸಿ ಅವರು, ನಾವು ಭಾರತದ ಸಂವಿಧಾನದ ಪ್ರಕಾರ ನಡೆಯುವವರು, ಲೋಕಸಭೆಯಲ್ಲಿ ಸಂವಿಧಾನ ಪ್ರತಿ ಹಿಡಿದುಕೊಂಡು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರಿ. ಇಲ್ಲಿ ಬಂದು ಷರಿಯತ್ ಕಾನೂನು ತರುತ್ತೀರಿ. ಕರ್ನಾಟಕದಲ್ಲಿ ಇದು ನಡೆಯಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…