ಹುಬ್ಬಳ್ಳಿ : ವಕ್ಫ್ ಬೋರ್ಡ್ ಹೆಸರಿನಲ್ಲಿ ಸಚಿವ ಜಮೀರ್ ಅಹಮದ್ ಖಾನ್ ರೈತರು ಮತ್ತು ಜನಸಾಮಾನ್ಯರ ಆಸ್ತಿ ಕಬಳಿಸುವ ಮೂಲಕ ದೇಶದ್ರೋಹಿ ಕೆಲಸ ಮಾಡುತ್ತಿದ್ದು, ಅವರನ್ನು ಗಲ್ಲಿಗೇರಿಸಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮೀರ್ ಅಹಮದ್ ಖಾನ್ ರಾಜ್ಯಾದ್ಯಂತ ವಕ್ಫ್ ಅದಾಲತ್ ನಡೆಸುತ್ತಿದ್ದು, ಇದು ಅತ್ಯಂತ ಗಂಭೀರವಾದ ವಿಷಯ. ಇವರಿಗೆ ಅಧಿಕಾರದಮದ ಏರಿದೆ. ತನ್ನ ಚಾಮರಾಜಪೇಟೆ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ದೇಶದ್ರೋಹಿ ಬಾಂಗ್ಲಾ ಮುಸ್ಲಿಮರನ್ನು ಸಲಹುತ್ತಿದ್ದಾರೆ. ಈತನಿಂದಲೇ ರಾಜ್ಯದಲ್ಲಿ ಧಂಗೆ, ಗಲಭೆ ನಡೆಯುತ್ತಿವೆ. ಬಿಜೆಪಿ ಸೇರಿದಂತೆ ಹಲವರು ಜಮೀರ್ ಅವರಿಗೆ ಸಚಿವ ಸಂಪುಟದಿಂದ ಕೈಬಿಡಬೇಕು, ದೇಶದಿಂದ ಗಡೀಪಾರು ಎಂಬಿತ್ಯಾದಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ನಾನು ಹೇಳುವೆ ಈ ಕೂಡಲೇ ಅವನನ್ನು ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.
ಇಡೀ ದೇಶದಲ್ಲಿ ರೈತರ ಭೂಮಿಗಳು, ಮನೆ, ಮಠ, ಸರ್ಕಾರಿ ಆಸ್ಪತ್ರೆ, ಕಚೇರಿ, ರಸ್ತೆಗಳು ವಕ್ಫ್ಗೆ ಹೋಗುತ್ತಿವೆ. ಇದು ದೇಶಾದ್ಯಂತ ವೈರಸ್ ರೀತಿ ಹರಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಗೂಳಿಯಂತೆ ನುಗ್ಗುತ್ತಿರುವುದು ನೋಡಿದರೆ ದೇಶಕ್ಕೆ ಗಂಡಾಂತರ ಸೃಷ್ಟಿಯಾಗಿದೆ. ದೇಶವನ್ನು ಇಸ್ಲಾಂ ದೇಶ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿನ ಕೆಲವು ಮುಸ್ಲಿಂ ಜಿಲ್ಲಾಧಿಕಾರಿ, ತಹಸೀಲ್ದಾರ್, ನೋಂದಣಾಧಿಕಾರಿ, ಪಿಡಿಒಗಳು ತಾವು ಸಲ್ಲಿಸುತ್ತಿರುವ ಪ್ರದೇಶಗಳಲ್ಲಿ ವಕ್ಫ್ ಬೋರ್ಡ್ ಹೆಸರಲ್ಲಿ ಅಮಾಯಕರ ಆಸ್ತಿ ಕಬಳಿಸುವ ಹುನ್ನಾರ ನಡೆಸಿದ್ದಾರೆ. ಈ ಕುರಿತು ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಕ್ಫ್ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ನಿರ್ಧಾರಕ್ಕೆ ಶ್ರೀರಾಮಸೇನೆ ಸ್ವಾಗತಿಸುತ್ತದೆ. ದೇಶದ ಎಲ್ಲ ಹಿಂದೂಗಳು ಒಂದಾಗಿ ಈ ವಕ್ಫ್ ವಿರುದ್ಧ ಹೋರಾಡಿದರೆ ಮಾತ್ರ ನಮ್ಮ ಉಳಿವು ಸಾಧ್ಯವಿದೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಎಲ್ಲ ಹಿಂದೂ ಬಾಂಧವರು ಬೆಂಬಲ ನೀಡಬೇಕು ಎಂದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…