Featured

ವಕ್ಫ್ ಮಂಡಳಿ ರದ್ದು ಗೊಳಿಸಿ, ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ ಐ ಸಂಘಟನೆ ನಿಷೇಧಕ್ಕೆ ಸರಕಾರ ಮುಂದಾಗಲಿ : ಯಶ್ ಪಾಲ್ ಸುವರ್ಣ ಆಗ್ರಹ – Vishwanews24

ವಕ್ಫ್ ಮಂಡಳಿ ರದ್ದು ಗೊಳಿಸಿ, ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ ಐ ಸಂಘಟನೆ ನಿಷೇಧಕ್ಕೆ ಸರಕಾರ ಮುಂದಾಗಲಿ : ಯಶ್ ಪಾಲ್ ಸುವರ್ಣ ಆಗ್ರಹ

ವಕ್ಫ್ ಮಂಡಳಿ ಅಕ್ರಮ ಆಸ್ತಿ ಕಬಳಿಕೆ ಮೂಲಕ ರಾಜ್ಯದಾದ್ಯಂತ ಭೂ ಅವ್ಯವಹಾರ ನಡೆಸಿ ಕೋಟ್ಯಂತರ ರೂಪಾಯಿಗಳ ಹಗರಣದ ನಡೆಸಿದ್ದ ಬಗ್ಗೆ 2012 ರಲ್ಲಿ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ರಾಜ್ಯ ಸರಕಾರಕ್ಕೆ ಸಲ್ಲಿಸಿದ ವರದಿಯನ್ನು ಗಂಭೀರವಾಗಿ ಪರಿಗಣಿಸಿ ವಕ್ಫ್ ಆಸ್ತಿಗಳ ಬಗ್ಗೆ ತನಿಖೆ ನಡೆಸಿ ಸರಕಾರದ ವಶಕ್ಕೆ ಪಡೆದು ವಕ್ಫ್ ಮಂಡಳಿಯನ್ನು ರಾಜ್ಯ ಸರಕಾರ ತಕ್ಷಣವೇ ರದ್ದು ಗೊಳಿಸುವಂತೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
 ಅಲ್ಪಸಂಖ್ಯಾತರ ಓಲೈಕೆಗಾಗಿ ವಿಶೇಷ ಆಸಕ್ತಿಯಿಂದ ಅಂದಿನ ಕಾಂಗ್ರೆಸ್ ಸರ್ಕಾರ 1995 ರಲ್ಲಿ ಜಾರಿಗೆ ತಂದ ವಕ್ಫ್ ಕಾಯಿದೆ ರಾಜಾರೋಷವಾಗಿ ಅಕ್ರಮ ಭೂ ಕಬಳಿಕೆಗೆ ಪೂರಕವಾಗಿರುವ ಪರಿಣಾಮ ಇಂದು ದೇಶದ ಸೇನೆ ಮತ್ತು ರೈಲ್ವೇ ಇಲಾಖೆಯನ್ನು ಹೊರತು ಪಡಿಸಿ ಅತ್ಯಧಿಕ ಪ್ರಮಾಣದ ಆಸ್ತಿ ಹೊಂದಿರುವ ಸಂಸ್ಥೆ ವಕ್ಫ್ ಮಂಡಳಿಯಾಗಿದೆ.
ತಮಿಳುನಾಡಿನಲ್ಲಿ ದೇವಸ್ಥಾನ ಸಹಿತವಾಗಿ ಇಡೀ ಗ್ರಾಮವನ್ನೇ ವಕ್ಫ್ ಮಂಡಳಿ ತನ್ನ ಆಸ್ತಿ ಎಂದು ಘೋಷಿಸಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಉಡುಪಿಯ ಕೊಡವೂರು ಜುಮಾದಿ ನಗರ ಮತ್ತು ರಾಜ್ಯದ ವಿವಿಧೆಡೆ ಇಂತಹ ಪ್ರಕರಣಗಳ ಬಗ್ಗೆ ಸರಕಾರ ಸೂಕ್ತ ತನಿಖೆ ನಡೆಸುವ ಅವಶ್ಯಕತೆಯಿದ್ದು, ಈ ಮೂಲಕ ಮತೀಯವಾದಿ ರಾಷ್ಟ್ರವಿರೋಧಿ ಸಂಘಟನೆಗಳ ಚಟವಟಿಕೆಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ.
ರಾಜ್ಯದಲ್ಲಿ ಮತೀಯವಾದಿ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳು ಹಿಜಾಬ್ ವಿವಾದವನ್ನು ಸೃಷ್ಟಿಸಿ ಬಡ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕು ಕಸಿಯಲು ಯತ್ನಿಸಿ, ಹೈ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಬಂದ್ ಕರೆ ನೀಡಿ ನ್ಯಾಯಾಂಗ ನಿಂದನೆ ಮಾಡಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡಿದ್ದಾರೆ. ಮುಸ್ಲಿಂ ರಾಷ್ಟ್ರ ಇರಾನ್ ನಲ್ಲಿ ಹಿಜಾಬ್ ವಿರೋಧಿಸಿ ಮಹಿಳೆಯರು ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಹಿಜಾಬ್ ವಿಚಾರವನ್ನು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ.
ಶಿವಮೊಗ್ಗದಲ್ಲಿ ಬಂಧಿತ ಐಸಿಸ್ ಉಗ್ರ ಸಂಘಟನೆಯ ಜೊತೆ ನಂಟು ಹೊಂದಿರುವ ಇಬ್ಬರು ಶಂಕಿತ ಉಗ್ರಗಾಮಿಗಳಲ್ಲಿ ಓರ್ವ ಈ ಹಿಂದೆ ಮಂಗಳೂರಿನಲ್ಲಿ ಪ್ರಚೋದನಾತ್ಮಕ ಗೋಡೆ ಬರಹದ ಆರೋಪಿಯಾಗಿದ್ದು, ಈ ಮೂಲಭೂತವಾದಿಗಳಿಗೆ ಪರೋಕ್ಷವಾಗಿ ವಕ್ಫ್ ಮಂಡಳಿಯ ಅಕ್ರಮ ಹಗರಣಗಳ ಹಣದ ಸಹಕಾರ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ದೇಶದಾದ್ಯಂತ ಎನ್ ಐ ಎ ನಡೆಸುತ್ತಿರುವ ಭಯೋತ್ಪಾದನೆ ಚಟುವಟಿಕೆಗಳ ನಿಯಂತ್ರಣಕ್ಕೆ ನಡೆಸುತ್ತಿರುವ ತನಿಖೆಗೂ ಅಡ್ಡಿ ಮಾಡುವ ಮೂಲಕ ಉದ್ದಟತನ ಮೆರೆಯುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರಕಾರ ದೇಶದಾದ್ಯಂತ ವಕ್ಫ್ ಮಂಡ ಳಿ ಯನ್ನು ರದ್ದುಗೊಳಿಸಿ, ಎಸ್ ಡಿ ಪಿ ಐ, ಪಿ ಎಫ್ ಐ ನಂತಹ ಐಸಿಸ್ ಮನಸ್ಥಿತಿಯ ರಾಷ್ಟ್ರವಿರೋಧಿ ಮತೀಯ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago