Featured

ವಕ್ಫ್ ಮಂಡಳಿ ರದ್ದು ಗೊಳಿಸಿ, ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ ಐ ಸಂಘಟನೆ ನಿಷೇಧಕ್ಕೆ ಸರಕಾರ ಮುಂದಾಗಲಿ : ಯಶ್ ಪಾಲ್ ಸುವರ್ಣ ಆಗ್ರಹ – Vishwanews24

ವಕ್ಫ್ ಮಂಡಳಿ ರದ್ದು ಗೊಳಿಸಿ, ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ ಐ ಸಂಘಟನೆ ನಿಷೇಧಕ್ಕೆ ಸರಕಾರ ಮುಂದಾಗಲಿ : ಯಶ್ ಪಾಲ್ ಸುವರ್ಣ ಆಗ್ರಹ

ವಕ್ಫ್ ಮಂಡಳಿ ಅಕ್ರಮ ಆಸ್ತಿ ಕಬಳಿಕೆ ಮೂಲಕ ರಾಜ್ಯದಾದ್ಯಂತ ಭೂ ಅವ್ಯವಹಾರ ನಡೆಸಿ ಕೋಟ್ಯಂತರ ರೂಪಾಯಿಗಳ ಹಗರಣದ ನಡೆಸಿದ್ದ ಬಗ್ಗೆ 2012 ರಲ್ಲಿ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ರಾಜ್ಯ ಸರಕಾರಕ್ಕೆ ಸಲ್ಲಿಸಿದ ವರದಿಯನ್ನು ಗಂಭೀರವಾಗಿ ಪರಿಗಣಿಸಿ ವಕ್ಫ್ ಆಸ್ತಿಗಳ ಬಗ್ಗೆ ತನಿಖೆ ನಡೆಸಿ ಸರಕಾರದ ವಶಕ್ಕೆ ಪಡೆದು ವಕ್ಫ್ ಮಂಡಳಿಯನ್ನು ರಾಜ್ಯ ಸರಕಾರ ತಕ್ಷಣವೇ ರದ್ದು ಗೊಳಿಸುವಂತೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
 ಅಲ್ಪಸಂಖ್ಯಾತರ ಓಲೈಕೆಗಾಗಿ ವಿಶೇಷ ಆಸಕ್ತಿಯಿಂದ ಅಂದಿನ ಕಾಂಗ್ರೆಸ್ ಸರ್ಕಾರ 1995 ರಲ್ಲಿ ಜಾರಿಗೆ ತಂದ ವಕ್ಫ್ ಕಾಯಿದೆ ರಾಜಾರೋಷವಾಗಿ ಅಕ್ರಮ ಭೂ ಕಬಳಿಕೆಗೆ ಪೂರಕವಾಗಿರುವ ಪರಿಣಾಮ ಇಂದು ದೇಶದ ಸೇನೆ ಮತ್ತು ರೈಲ್ವೇ ಇಲಾಖೆಯನ್ನು ಹೊರತು ಪಡಿಸಿ ಅತ್ಯಧಿಕ ಪ್ರಮಾಣದ ಆಸ್ತಿ ಹೊಂದಿರುವ ಸಂಸ್ಥೆ ವಕ್ಫ್ ಮಂಡಳಿಯಾಗಿದೆ.
ತಮಿಳುನಾಡಿನಲ್ಲಿ ದೇವಸ್ಥಾನ ಸಹಿತವಾಗಿ ಇಡೀ ಗ್ರಾಮವನ್ನೇ ವಕ್ಫ್ ಮಂಡಳಿ ತನ್ನ ಆಸ್ತಿ ಎಂದು ಘೋಷಿಸಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಉಡುಪಿಯ ಕೊಡವೂರು ಜುಮಾದಿ ನಗರ ಮತ್ತು ರಾಜ್ಯದ ವಿವಿಧೆಡೆ ಇಂತಹ ಪ್ರಕರಣಗಳ ಬಗ್ಗೆ ಸರಕಾರ ಸೂಕ್ತ ತನಿಖೆ ನಡೆಸುವ ಅವಶ್ಯಕತೆಯಿದ್ದು, ಈ ಮೂಲಕ ಮತೀಯವಾದಿ ರಾಷ್ಟ್ರವಿರೋಧಿ ಸಂಘಟನೆಗಳ ಚಟವಟಿಕೆಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗಲಿದೆ.
ರಾಜ್ಯದಲ್ಲಿ ಮತೀಯವಾದಿ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳು ಹಿಜಾಬ್ ವಿವಾದವನ್ನು ಸೃಷ್ಟಿಸಿ ಬಡ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕು ಕಸಿಯಲು ಯತ್ನಿಸಿ, ಹೈ ಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಬಂದ್ ಕರೆ ನೀಡಿ ನ್ಯಾಯಾಂಗ ನಿಂದನೆ ಮಾಡಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಯತ್ನ ಮಾಡಿದ್ದಾರೆ. ಮುಸ್ಲಿಂ ರಾಷ್ಟ್ರ ಇರಾನ್ ನಲ್ಲಿ ಹಿಜಾಬ್ ವಿರೋಧಿಸಿ ಮಹಿಳೆಯರು ಬೀದಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಹಿಜಾಬ್ ವಿಚಾರವನ್ನು ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ.
ಶಿವಮೊಗ್ಗದಲ್ಲಿ ಬಂಧಿತ ಐಸಿಸ್ ಉಗ್ರ ಸಂಘಟನೆಯ ಜೊತೆ ನಂಟು ಹೊಂದಿರುವ ಇಬ್ಬರು ಶಂಕಿತ ಉಗ್ರಗಾಮಿಗಳಲ್ಲಿ ಓರ್ವ ಈ ಹಿಂದೆ ಮಂಗಳೂರಿನಲ್ಲಿ ಪ್ರಚೋದನಾತ್ಮಕ ಗೋಡೆ ಬರಹದ ಆರೋಪಿಯಾಗಿದ್ದು, ಈ ಮೂಲಭೂತವಾದಿಗಳಿಗೆ ಪರೋಕ್ಷವಾಗಿ ವಕ್ಫ್ ಮಂಡಳಿಯ ಅಕ್ರಮ ಹಗರಣಗಳ ಹಣದ ಸಹಕಾರ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ದೇಶದಾದ್ಯಂತ ಎನ್ ಐ ಎ ನಡೆಸುತ್ತಿರುವ ಭಯೋತ್ಪಾದನೆ ಚಟುವಟಿಕೆಗಳ ನಿಯಂತ್ರಣಕ್ಕೆ ನಡೆಸುತ್ತಿರುವ ತನಿಖೆಗೂ ಅಡ್ಡಿ ಮಾಡುವ ಮೂಲಕ ಉದ್ದಟತನ ಮೆರೆಯುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರಕಾರ ದೇಶದಾದ್ಯಂತ ವಕ್ಫ್ ಮಂಡ ಳಿ ಯನ್ನು ರದ್ದುಗೊಳಿಸಿ, ಎಸ್ ಡಿ ಪಿ ಐ, ಪಿ ಎಫ್ ಐ ನಂತಹ ಐಸಿಸ್ ಮನಸ್ಥಿತಿಯ ರಾಷ್ಟ್ರವಿರೋಧಿ ಮತೀಯ ಸಂಘಟನೆಯನ್ನು ನಿಷೇಧಿಸುವಂತೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago