ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ಕಾಯ್ದಿರಿಸಿದೆ.
ವಚನಾನಂದ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಜಾಮೀನು ರದ್ದು ಅರ್ಜಿ ವಿಚಾರಣೆ ಕಳೆದ ಜೂ.11 ರಂದು ನಡೆದಿತ್ತು. ಈಗ ಹೈಕೋರ್ಟ್ನಲ್ಲಿ ಜೂ.23ಕ್ಕೆ ವಚನಾನಂದ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇದ್ದು, ಹೈಕೋರ್ಟ್ ಅದೇಶದ ಬಳಿಕ ಜಿಲ್ಲಾ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ತೀರ್ಪನ್ನು ಪ್ರಕಟಿಸಲಿದೆ ಎಂದು ಸ್ವಾಮೀಜಿ ಪರ ವಕೀಲ ಎಸ್.ವಿ ಪಾಟೀಲ್ ತಿಳಿಸಿದರು.
ಇದನ್ನೂ ಓದಿ:
ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ ಮೆಟ್ಟಿಲೇರಿರುವುದು ಜಿಲ್ಲಾ ನ್ಯಾಯಾಲಯದ ಆದೇಶ ತಡವಾಗಲು ಕಾರಣವಾಗಿದೆ. ಕಳೆದ ಜೂ.6 ರಂದೇ ಸಂತ್ರಸ್ತ ಬಾಲಕನ ತಾಯಿ ವಚನಾನಂದ ಸ್ವಾಮೀಜಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವಿಚಾರವನ್ನು ದೂರುದಾರರು ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ತಿಳಿಸಿರಲಿಲ್ಲ. ಅದ್ದರಿಂದ ಇಂದಿನ ಅದೇಶ ಮುಂದೂಡಿಕೆಯಾಗಿದೆ.
ಹೈಕೋರ್ಟ್ನಲ್ಲಿ ಜೂ.23 ರಂದು ಜಾಮೀನು ರದ್ದತಿ ಅರ್ಜಿಯ ವಿಚಾರಣೆ ನಡೆಯಲಿದ್ದು, ಖುದ್ದಾಗಿ ವಚನಾನಂದ ಶ್ರೀಗಳು ತಮ್ಮ ವಕೀಲರ ಜೊತೆ ಹೈಕೋರ್ಟ್ಗೆ ಹಾಜರಾಗಲಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…