ಬೆಂಗಳೂರು:ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಹಂಚಿಕೊಂಡ ಸಿಎಂ, ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದಿದ್ದಾರೆ.
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ…
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…