ಕೋಲ್ಕತ್ತಾ: ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ.
19 ವರ್ಷದ ಯುವತಿ ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದಳು. ನಂತರ ಕೋಲ್ಕತ್ತಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಆಕೆಯ ತಂದೆ, ತಮ್ಮ ಮಗಳ ಮೇಲೆ ಪ್ರಭಾವ ಬೀರಿ ಅನ್ಯ ಧರ್ಮದ ವ್ಯಕ್ತಿ ಮದುವೆಯಾಗಿದ್ದು, ತನ್ನ ಮಗಳ ಹೇಳಿಕೆಯನ್ನು ಮ್ಯಾಜಿಸ್ಟ್ರೇಟರ ಮುಂದೆ ದಾಖಲು ಸಹ ಮಾಡಿಕೊಳ್ಳಲು ಬಿಡಲಿಲ್ಲ ಎಂದು ಆರೋಪಿಸಿದ್ದರು.
ಯುವತಿಯ ತಂದೆ ಸಲ್ಲಿಸಿದ ಎಫ್ಐಆರ್ ಪ್ರಕಾರ, ಪೊಲೀಸರು ಯುವತಿಯನ್ನು ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ ಆಕೆ ತನ್ನ ಇಷ್ಟದ ಪ್ರಕಾರವೇ ಮದುವೆಯಾಗಿರುವುದಾಗಿ ತಿಳಿಸಿದಳು.
ವಯಸ್ಕ ಹೆಣ್ಣುಮಗಳು ಆಕೆಯ ಆಯ್ಕೆ ಪ್ರಕಾರ ಮದುವೆಯಾಗಿ ಪತಿಯ ಧರ್ಮಕ್ಕೆ ಮತಾಂತರವಾಗಲು ಬಯಸಿದರೆ ಮತ್ತು ತನ್ನ ತಾಯಿಯ ಮನೆಗೆ ಹಿಂತಿರುಗಲು ಮನಸ್ಸು ತೋರದಿದ್ದರೆ ಆಕೆಯ ನಿರ್ಧಾರವನ್ನು ತಡೆಯಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜಿಬ್ ಬ್ಯಾನರ್ಜಿ ಮತ್ತು ಅರಿಜಿತ್ ಬ್ಯಾನರ್ಜಿ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…