Featured

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್

ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆ (ರಿ .)ಉಡುಪಿ ಜಿಲ್ಲೆ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕು ಉಪ್ಪೂರಿನಲ್ಲಿ 1.11 ಎಕ್ರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ” ವಯೋವಂದನ ಆತಿಥ್ಯ ಗೃಹ” ಯೋಜನೆ ಹಿರಿಯರ ಬದುಕಿನ ಸಂಧ್ಯಾಕಾಲದ ಆಸರೆ ಆಗಲಿದ್ದು, ಈ ಯೋಜನೆಯ ನಿರ್ಮಾಣ ಕಾರ್ಯ ಮತ್ತು ಆ ಬಳಿಕದ ನಿರ್ವಹಣೆಗೆ ಸಮಾಜದ ಸಹಭಾಗಿತ್ವ ಅತಿ ಅಗತ್ಯ.

ಜಿ ಎಸ್ ಬಿ ಸಮಾಜ ಹಿತ ರಕ್ಷಣಾ ವೇದಿಕೆ ಕಳೆದ 14 ವರ್ಷಗಳಿಂದ ಸಮಾಜ ಸಂಘಟನೆ ಮತ್ತು ಸಮಾಜಮುಖಿ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗದವರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದು, ಎಲ್ಲಾ ಅಡೆತಡೆ ಸವಾಲುಗಳನ್ನು ಎದುರಿಸಿ ಸಮಾಜದ ಅವಶ್ಯಕತೆ ಇರುವ ಹಿರಿಯ ನಾಗರಿಕರಿಗೆ ನೆಮ್ಮದಿಯ ತಾಣದ ನಿರ್ಮಾಣ ಮತ್ತು ಯಶಸ್ವಿ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಯೋಜನೆಗೆ ವೈಯುಕ್ತಿಕವಾಗಿ ಮತ್ತು ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ವತಿಯಿಂದ ಸಂಪೂರ್ಣ ಸಹಕಾರ ಮತ್ತು ಸಹಭಾಗಿತ್ವ ನೀಡುವುದಾಗಿ ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ನೂತನ ವಿಶ್ವಸ್ಥರಾದ ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್ ತಿಳಿಸಿದರು.

ಅವರು ಜೂನ್ 28 ಆದಿತ್ಯವಾರದಂದು ಸಂಜೆ ಉಡುಪಿಯ ಶ್ರೀ ಪದ್ಮಾವತಿ ಸಭಾಭವನದಲ್ಲಿ ನಿರ್ಮಾಣ ಯೋಜನೆಯ ವಿವಿಧ ಸಮಿತಿಗಳ ರಚನೆ ಮತ್ತು ಸಮಾಲೋಚನಾ ಸಭೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು.

ಉಡುಪಿಯ ತ್ರಿಶಾ ವಿದ್ಯಾ ಕಾಲೇಜಿನ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ಮತ್ತು ಮೂಡಬಿದ್ರೆ ವಿಜಯ್ ಕುಮಾರ್ ಶೆಣೈ ಯವರು ವಯೋವಂದನ ಯೋಜನೆಯ ಕಟ್ಟಡ ನಿರ್ಮಾಣದ ಪೂರ್ವಭಾವಿ ಸಿದ್ಧತೆ, ಯೋಜನೆಯ ನಿರ್ವಹಣೆಯ ಖರ್ಚು ವೆಚ್ಚದ ವಿವರಗಳನ್ನು ದೃಶ್ಯ ಶ್ರಾವ್ಯ ಮಾಧ್ಯಮದ ಮೂಲಕ ವಿವರಿಸಿದರು.

ವಿವಿಧ ಸಮಿತಿಗಳ ರಚನೆ

ಇದೇ ಸಂದರ್ಭದಲ್ಲಿ ವಯೋವಂದನ ಕಟ್ಟಡ ನಿರ್ಮಾಣ ಯೋಜನ ಸಮಿತಿ ಅಧ್ಯಕ್ಷರಾಗಿ ಬೆಂಗಳೂರಿನ ಮಹಾಲಸಾ ಎಲೆಕ್ಟ್ರಿಕಲ್ ನ ಮಾಲಕರಾದ ಮೂಡಬಿದ್ರೆ ಶ್ರೀ ವಿಜಯಕುಮಾರ್ ಶೆಣೈ, ಸಂಚಾಲಕರಾಗಿ ಕಾಪು ಹರೀಶ್ ನಾಯಕ್, ಶ್ರೀ ಕೆ.ಸಿ. ಕಾಮತ್, ಬಾಲಕೃಷ್ಣ ಶೆಣೈ ಮಣಿಪಾಲ.

ಹಣಕಾಸು ಸಮಿತಿ ಮತ್ತು ಲೆಕ್ಕಪತ್ರ ಮೇಲ್ವಿಚಾರಣ ಸಮಿತಿಯ ಅಧ್ಯಕ್ಷರಾಗಿ ಸಿಎ ಗೋಪಾಲಕೃಷ್ಣ ಭಟ್, ಗೌರವ ಸಲಹೆಗಾರರಾಗಿ ಸಿಎ ಎಸ್ಎಸ್ ನಾಯಕ್ ಮಂಗಳೂರು, ಮತ್ತು ಸಂಚಾಲಕರುಗಳಾಗಿ ಶ್ರೀ ನಾಗೇಶ್ ಕಾಮತ್ ಮತ್ತು ಮೋಹನದಾಸ ಶಾನುಭಾಗ್, ಅಜಿತ್ ಶೆಣೈ ಉಡುಪಿ.

ಕಟ್ಟಡ ನಿರ್ಮಾಣ ಸಾಮಗ್ರಿ ಸಂಗ್ರಹಣ ಮತ್ತು ಮೇಲ್ವಿಚಾರಣಾ ಸಮಿತಿ ಸಂಚಾಲಕರುಗಳಾಗಿ ಬೆಳ್ಮಣ್ ವೆಂಕಟರಾಯ ಕಾಮತ್ ಮತ್ತು ಮೂಡಬಿದ್ರೆ ರಘುವೀರ್ ಶೆಣೈ ಯ ವರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಯಿತು.

ಕಟ್ಟಡ ನಿರ್ಮಾಣ ಕೆಲಸದ ಗುತ್ತಿಗೆಯನ್ನು ಬೆಳ್ಮಣ್ ಕಾಮಾಕ್ಷಿ ಕನ್ಸ್ಟ್ರಕ್ಷನ್ ನ ಶ್ರೀ ಸುಧೀರ್ ಕಾಮತ್ ರವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಏಜಿಎಂ ಉಡುಪಿಯ ಶ್ರೀ ಅಶೋಕ್ ನಾಯಕ್, ನಿವೃತ್ತ ಬ್ಯಾಂಕರ್ ಕಾಪುವಿನ ಶ್ರೀ ಲಕ್ಷ್ಮೀನಾರಾಯಣ ನಾಯಕ್ ದಂಪತಿಗಳು, ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕಾರ್ಪೊರೇಟಿವ್ ಸೊಸೈಟಿಯ ವತಿಯಿಂದ ನಿವೃತ್ತ ಬ್ಯಾಂಕರ್ ಮಲ್ಪೆ ಶ್ರೀನಿವಾಸ್ ಭಟ್ ನೇತ್ರತ್ವದಲ್ಲಿ ಹಾಗೂ ಉಡುಪಿಯ ಯು ಎಸ್ ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿಶ್ವಸ್ಥರಾದ ಬಂಗಾಳ ಸಿಎ ಸುರೇಶ್ ನಾಯಕ್ ಮತ್ತು ಸಿಎ ಗುಜ್ಜಾಡಿ ಪ್ರಭಾಕರ್ ನಾಯಕ್ ರವರು ವಯೋವಂದನ ಯೋಜನೆಯ ಕೊಠಡಿ ನಿರ್ಮಾಣಕ್ಕೆ ತಲಾ 8 ಲಕ್ಷ ರೂಪಾಯಿ ದೇಣಿಗೆ ಚೆಕ್ಕನ್ನು ವೇದಿಕೆಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ರಾಜ್ ಗೋಪಾಲ್ ಶೆಣೈ,ಉಡುಪಿ ಮತ್ತು ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕರಾದ ಸಿಎ ಎಸ್ಎಸ್ ನಾಯಕ್ ರವರು ಮಾತನಾಡಿದರು.

ವೇದಿಕೆಯಲ್ಲಿ ಉಡುಪಿಯ ಖ್ಯಾತ ಸರ್ಜನ್ ಡಾ. ಸುರೇಶ್ ಶೆಣೈ, ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ವಿಶ್ವಸ್ಥರಾದ ಶ್ರೀ ಕೆ.ಕರಾಮರಾಯ ಕಿಣಿ, ಉಡುಪಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ವಿಶ್ವಸ್ಥರಾದ ಶ್ರೀ ಮಹೇಶ ಶೆಣೈ ,ಯುವಕ ಮಂಡಳಿಯ ಅಧ್ಯಕ್ಷರಾದ ನಿತೇಶ್ ಶೆಣೈ, ಮತ್ತು ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನದ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಸೀಮಾ. ಎಸ್. ಪೈ ಯವರು ಉಪಸ್ಥಿತರಿದ್ದರು.

ಸನ್ಮಾನ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆಯ ಪರಿಕಲ್ಪನೆ ಮತ್ತು ಸಂಯೋಜನೆಯಲ್ಲಿ ಸಿದ್ಧಗೊಂಡಿರುವ “ಡಾ .ಪಿ. ದಯಾನಂದ ಪೈ ಸಾರ್ಥಕ ಬದುಕಿನ ಸಾಕ್ಷಾತ್ಕಾರ ” ಎನ್ನುವ ಪುಸ್ತಕದ ಸಂಪಾದಕಿಯಾದ ಕಾರ್ಕಳದ ಪ್ರತಿಭಾನ್ವಿತ ಲೇಖಕಿ ಶ್ರೀಮತಿ ಪ್ರಜ್ವಲಾ ಶೆಣೈಯವರಿಗೆ ಸನ್ಮಾನಿಸಿ, ಗೌರವಾರ್ಪಣೆ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವೇದಮೂರ್ತಿ ಶ್ರೀಚೇಂಪಿ ರಾಮಚಂದ್ರ ಅನಂತ ಭಟ್ಟರವರು, ವೇದಿಕೆಯ ಮಹತ್ವಕಾಂಕ್ಷಿ ಯೋಜನೆಗೆ ಸಮಾಜದ ದಾನಿಗಳಿಂದ ಈಗಾಗಲೇ ಉತ್ತಮ ಪ್ರತಿಕ್ರಿಯೆ ಲಭಿಸುತ್ತಿದ್ದು, ಆದಷ್ಟು ಶೀಘ್ರ ನಿರ್ಮಾಣ ಕಾರ್ಯ ಸಂಪೂರ್ಣಗೊಂಡು ಸಮಾಜದ ಹಿರಿಯರ ಬಾಳಿಗೆ ಈ ಯೋಜನೆ ಆಸರೆಯಾಗಲಿ ಎಂದು ಶುಭ ಹಾರೈಸಿದರು.

ಬಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಶ್ರೀ ಜಿ. ಸತೀಶ್ ಹೆಗಡೆ ಸ್ವಾಗತಿಸಿ ,ವೇದಿಕೆಯ ಸಂಚಾಲಕರಾದ ಆರ್. ವಿವೇಕಾನಂದ ಶೆಣೈಯವರು ಪ್ರಸ್ತಾವನೆಗೈದರು, ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ರಾಮತ್ ರವರು ಕಾರ್ಯಕ್ರಮ ನಿರೂಪಿಸಿ ,ಕಾಪು ಹರೀಶ್ ನಾಯಕ್ ರವರು ವಂದನಾರ್ಪಣೆಗೆದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago