Featured

ವರದಕ್ಷಿಣೆ ಕಿರುಕುಳ ಆರೋಪ : ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲು – vishwanews24

ವರದಕ್ಷಿಣೆ ಕಿರುಕುಳ ಆರೋಪ : ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರಿನಲ್ಲಿ ಏನಿದೆ?

ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.

ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

7 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

7 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

9 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

9 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

9 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

10 hours ago