Featured

ವರದಕ್ಷಿಣೆ ಕಿರುಕುಳ:  ನವವಿವಾಹಿತೆ ಆತ್ಮಹತ್ಯೆ – vishwanews24

800 ಗ್ರಾಂ ಚಿನ್ನ, 70 ಲಕ್ಷದ ಕಾರು ನೀಡಿದರೂ ವರದಕ್ಷಿಣೆ ಕಿರುಕುಳ

ಚೆನ್ನೈ : 800 ಗ್ರಾಂ ಚಿನ್ನ, 70 ಲಕ್ಷ ರೂ. ಮೌಲ್ಯದ ಕಾರು ನೀಡಿದ ಬಳಿಕವೂ ವರದಕ್ಷಿಣೆಗಾಗಿ ಪತಿಯ ಮನೆಯವರು ನೀಡುತ್ತಿದ್ದ ಕಿರುಕುಳ ತಾಳಲಾಗದೇ ನವವಿವಾಹಿತೆ ಆತ್ಮಹತ್ಯೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುಪ್ಪೂರಿನಲ್ಲಿ ನಡೆದಿದೆ.

ರಿಧನ್ಯಾ(27) ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಏಪ್ರಿಲ್‌ನಲ್ಲಿ ಕವಿನ್ ಕುಮಾರ್(28) ಎಂಬುವವರನ್ನು ರಿಧನ್ಯಾ ವಿವಾಹವಾಗಿದ್ದರು. ಮದುವೆಯಲ್ಲಿ ೮೦೦ ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು.

ಭಾನುವಾರದಂದು ರಿಧನ್ಯಾ ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮನೆಯಿಂದ ಹೊರಟಿದ್ದರು. ಬಳಿಕ ದಾರಿ ಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ. ಬಹಳ ಹೊತ್ತಿನಿಂದ ಈ ಪ್ರದೇಶದಲ್ಲಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಜೊತೆಗೆ ಬಾಯಿಯಲ್ಲಿ ನೊರೆ ಬಂದಿರುವುದನ್ನು ಕಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

ಸದ್ಯ ರಿಧನ್ಯಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

24 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

24 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago