ಚೆನ್ನೈ : 800 ಗ್ರಾಂ ಚಿನ್ನ, 70 ಲಕ್ಷ ರೂ. ಮೌಲ್ಯದ ಕಾರು ನೀಡಿದ ಬಳಿಕವೂ ವರದಕ್ಷಿಣೆಗಾಗಿ ಪತಿಯ ಮನೆಯವರು ನೀಡುತ್ತಿದ್ದ ಕಿರುಕುಳ ತಾಳಲಾಗದೇ ನವವಿವಾಹಿತೆ ಆತ್ಮಹತ್ಯೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುಪ್ಪೂರಿನಲ್ಲಿ ನಡೆದಿದೆ.
ರಿಧನ್ಯಾ(27) ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಏಪ್ರಿಲ್ನಲ್ಲಿ ಕವಿನ್ ಕುಮಾರ್(28) ಎಂಬುವವರನ್ನು ರಿಧನ್ಯಾ ವಿವಾಹವಾಗಿದ್ದರು. ಮದುವೆಯಲ್ಲಿ ೮೦೦ ಗ್ರಾಂ ಚಿನ್ನಾಭರಣ ಮತ್ತು 70 ಲಕ್ಷ ರೂ. ಮೌಲ್ಯದ ವೋಲ್ವೋ ಕಾರನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು.
ಭಾನುವಾರದಂದು ರಿಧನ್ಯಾ ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮನೆಯಿಂದ ಹೊರಟಿದ್ದರು. ಬಳಿಕ ದಾರಿ ಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ. ಬಹಳ ಹೊತ್ತಿನಿಂದ ಈ ಪ್ರದೇಶದಲ್ಲಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಜೊತೆಗೆ ಬಾಯಿಯಲ್ಲಿ ನೊರೆ ಬಂದಿರುವುದನ್ನು ಕಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ರಿಧನ್ಯಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆಕೆಯ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…