ಚಿಕ್ಕಮಗಳೂರು : ವರದಕ್ಷಿಣೆ ಕಿರುಕುಳ ನೀಡಿರುವುದಲ್ಲದೇ ಹಲ್ಲೆ ಮಾಡಿರುವ ಆರೋಪ ಸಂಬಂಧ ಕಳಸ ಪೊಲೀಸ್ ಠಾಣೆಯ ಪಿಎಸ್ಸೈ ನಿತ್ಯಾನಂದಗೌಡ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಆದೇಶಿಸಿದ್ದಾರೆ.
ಜ.17ರಂದು ರಾತ್ರಿ ಕಳಸ ಪೊಲೀಸ್ ಠಾಣೆಯ ಪಿಎಸೈ ನಿತ್ಯಾನಂದ ಅವರು ಪಟ್ಟಣದ ಪೊಲೀಸ್ ವಸತಿಗೃಹದಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವುದಲ್ಲದೇ 50 ಲಕ್ಷ ರೂ. ವರದಕ್ಷಿಣೆ ನೀಡಬೇಕು ಎಂದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪಿಎಸ್ಸೈ ಪತ್ನಿ ಅಮಿತಾ ಎಂಬವರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಪತಿ ನಿತ್ಯಾನಂದಗೌಡ ಅವರೊಂದಿಗೆ ನಿತ್ಯಾನಂದಗೌಡ ತಾಯಿ ಪ್ರೇಮಾ, ಸಹೋದರಿ ಮೇನಕಾ, ಸಹೋದರ ಸೂರ್ಯಾನಂದ ಹಾಗೂ ಮೇನಕಾ ಪತಿ ಚಂದ್ರಕಾಂತ್ ಕೊಠಾರಿ ಎಂಬವರ ವಿರುದ್ಧ ಅಮಿತಾ ದೂರು ದಾಖಲಿಸಿದ್ದರು. ಪತ್ನಿಯ ದೂರಿನ ಬೆನ್ನಿಗೆ ಪಿಎಸ್ಸೈ ನಿತ್ಯಾನಂದ ಕೂಡ ಅಮಿತಾ ವಿರುದ್ಧವೂ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಠಾಣೆಯಲ್ಲಿ ದಂಪತಿ ವಿರುದ್ಧ ದೂರು ಪ್ರತಿದೂರು ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ರವಿವಾರ ಪಶ್ಚಿಮ ವಲಯದ ಐಜಿಪಿ ಅಮಿತ್ಸಿಂಗ್ ಕಳಸ ಪೊಲೀಸ್ ಠಾಣೆಯ ಪಿಎಸ್ಸೈ ನಿತ್ಯಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…