ಚಿಕ್ಕಮಗಳೂರು : ವರದಕ್ಷಿಣೆ ಕಿರುಕುಳ ನೀಡಿರುವುದಲ್ಲದೇ ಹಲ್ಲೆ ಮಾಡಿರುವ ಆರೋಪ ಸಂಬಂಧ ಕಳಸ ಪೊಲೀಸ್ ಠಾಣೆಯ ಪಿಎಸ್ಸೈ ನಿತ್ಯಾನಂದಗೌಡ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ಆದೇಶಿಸಿದ್ದಾರೆ.
ಜ.17ರಂದು ರಾತ್ರಿ ಕಳಸ ಪೊಲೀಸ್ ಠಾಣೆಯ ಪಿಎಸೈ ನಿತ್ಯಾನಂದ ಅವರು ಪಟ್ಟಣದ ಪೊಲೀಸ್ ವಸತಿಗೃಹದಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವುದಲ್ಲದೇ 50 ಲಕ್ಷ ರೂ. ವರದಕ್ಷಿಣೆ ನೀಡಬೇಕು ಎಂದು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪಿಎಸ್ಸೈ ಪತ್ನಿ ಅಮಿತಾ ಎಂಬವರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಪತಿ ನಿತ್ಯಾನಂದಗೌಡ ಅವರೊಂದಿಗೆ ನಿತ್ಯಾನಂದಗೌಡ ತಾಯಿ ಪ್ರೇಮಾ, ಸಹೋದರಿ ಮೇನಕಾ, ಸಹೋದರ ಸೂರ್ಯಾನಂದ ಹಾಗೂ ಮೇನಕಾ ಪತಿ ಚಂದ್ರಕಾಂತ್ ಕೊಠಾರಿ ಎಂಬವರ ವಿರುದ್ಧ ಅಮಿತಾ ದೂರು ದಾಖಲಿಸಿದ್ದರು. ಪತ್ನಿಯ ದೂರಿನ ಬೆನ್ನಿಗೆ ಪಿಎಸ್ಸೈ ನಿತ್ಯಾನಂದ ಕೂಡ ಅಮಿತಾ ವಿರುದ್ಧವೂ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಠಾಣೆಯಲ್ಲಿ ದಂಪತಿ ವಿರುದ್ಧ ದೂರು ಪ್ರತಿದೂರು ದಾಖಲಾಗಿತ್ತು.
ಈ ಪ್ರಕರಣ ಸಂಬಂಧ ರವಿವಾರ ಪಶ್ಚಿಮ ವಲಯದ ಐಜಿಪಿ ಅಮಿತ್ಸಿಂಗ್ ಕಳಸ ಪೊಲೀಸ್ ಠಾಣೆಯ ಪಿಎಸ್ಸೈ ನಿತ್ಯಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…