Featured

ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯ : ನವವಿವಾಹಿತೆ ಆತ್ಮಹತ್ಯೆ – vishwanews24

ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯ : ನವವಿವಾಹಿತೆ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯಾ (26) ಆತ್ಮಹತ್ಯೆ ಮಾಡಿಕೊಂಡವರು. ಈ ಸಂಬಂಧ ಆಕೆಯ ಪತಿ ಲಿಖಿತ್ ಸಿಂಹ, ಸಹೋದರ ವರುಣ್ ಸಿಂಹ, ತಾಯಿ ಅರುಣಾ ಸಿಂಹರನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಪ್ರಾಥಮಿಕವಾಗಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಐಶ್ವರ್ಯ ಅವರ ತಂದೆ ಕೃಷ್ಣ ಅವರು ವರದಕ್ಷಿಣೆ ಹಾಗೂ ಹಲ್ಲೆ ಆರೋಪದಡಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯ ಎಂಬಿಎ ವ್ಯಾಸಂಗ ಮಾಡಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹನನ್ನು ಅಕ್ಟೋಬರ್ 26ರಂದು ಮದುವೆಯಾಗಿ ದ್ದರು. ಮದುವೆ ಸಂದರ್ಭದಲ್ಲೇ ಹೆಚ್ಚಿನ ಚಿನ್ನಾಭರಣಕ್ಕೆ ಬೇಡಿಕೆ ಇಟ್ಟಿದ್ದು, ಇಡೀ ಮದುವೆಗೆ 18 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ, ಮದುವೆಯಾದ 15 ದಿನಕ್ಕೆ ಪತಿ ಮತ್ತು ಆತನ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ ನೀಡಿ, ಆಕೆ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಿಂದ ಬೇಸತ್ತ ಆಕೆ ತವರು ಮನೆಗೆ ಹೋಗಿ, ಪೋಷಕರ ಬಳಿ ಹೇಳಿಕೊಂಡಿದ್ದರು.

ಬಳಿಕ ಡಿ.24ರಂದು ಬೆಳಗ್ಗೆ ಕೂಡ ಆಕೆಯ ಪೋಷಕರು ಬಂದು ರಾಜಿಸಂಧಾನ ಮಾಡಿ ಹೋಗಿದ್ದರು. ಚಿನ್ನ, ಹಣ ತರುವಂತೆ ಒತ್ತಾಯ: ಲಿಖೀತ್ ಮತ್ತು ಕುಟುಂಬ ಸದಸ್ಯರು ತವರು ಮನೆಯಿಂದ ಹಣ ಹಾಗೂ ಚಿನ್ನಾಭರಣ ತರುವಂತೆ ಐಶ್ವರ್ಯಾಗೆ ಕಿರುಕುಳ ಕೊಡುತ್ತಿದ್ದರು. ಲಿಖಿತ್, ಪತ್ನಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡಿ ಮನಬಂದಂತೆ ನಿಂದಿಸುತ್ತಿ ದ್ದರು. ಪ್ರತಿ ವಿಚಾರದಲ್ಲೂ ತಾಯಿಯ ಅಣತಿಯಂತೆ ನಡೆದುಕೊಳ್ಳುತ್ತಿದ್ದರು. ಪತ್ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ವಿಷಯ ತಿಳಿದು ಐಶ್ವರ್ಯಾ ಕುಟುಂಬಸ್ಥರು ಬುಧವಾರ ಬೆಳಿಗ್ಗೆ ಲಿಖಿತ್ ಮನೆಗೆ ಬಂದು ಮಾತುಕತೆ ನಡೆಸಿ ಹೋಗಿದ್ದರು. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ಲಿಖಿತ್ ಕರೆ ಮಾಡಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

5 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

5 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

6 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

6 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago