Featured

ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯ : ನವವಿವಾಹಿತೆ ಆತ್ಮಹತ್ಯೆ – vishwanews24

ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯ : ನವವಿವಾಹಿತೆ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯಾ (26) ಆತ್ಮಹತ್ಯೆ ಮಾಡಿಕೊಂಡವರು. ಈ ಸಂಬಂಧ ಆಕೆಯ ಪತಿ ಲಿಖಿತ್ ಸಿಂಹ, ಸಹೋದರ ವರುಣ್ ಸಿಂಹ, ತಾಯಿ ಅರುಣಾ ಸಿಂಹರನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಪ್ರಾಥಮಿಕವಾಗಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಐಶ್ವರ್ಯ ಅವರ ತಂದೆ ಕೃಷ್ಣ ಅವರು ವರದಕ್ಷಿಣೆ ಹಾಗೂ ಹಲ್ಲೆ ಆರೋಪದಡಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ನಾಗಮಂಗಲದ ಚೀಣ್ಯ ಮೂಲದ ಐಶ್ವರ್ಯ ಎಂಬಿಎ ವ್ಯಾಸಂಗ ಮಾಡಿದ್ದು, ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹನನ್ನು ಅಕ್ಟೋಬರ್ 26ರಂದು ಮದುವೆಯಾಗಿ ದ್ದರು. ಮದುವೆ ಸಂದರ್ಭದಲ್ಲೇ ಹೆಚ್ಚಿನ ಚಿನ್ನಾಭರಣಕ್ಕೆ ಬೇಡಿಕೆ ಇಟ್ಟಿದ್ದು, ಇಡೀ ಮದುವೆಗೆ 18 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ, ಮದುವೆಯಾದ 15 ದಿನಕ್ಕೆ ಪತಿ ಮತ್ತು ಆತನ ಕುಟುಂಬ ಸದಸ್ಯರು ವರದಕ್ಷಿಣೆ ಕಿರುಕುಳ ನೀಡಿ, ಆಕೆ ಮೇಲೆ ಹಲ್ಲೆ ನಡೆಸಿದ್ದಾರೆ. ಅದರಿಂದ ಬೇಸತ್ತ ಆಕೆ ತವರು ಮನೆಗೆ ಹೋಗಿ, ಪೋಷಕರ ಬಳಿ ಹೇಳಿಕೊಂಡಿದ್ದರು.

ಬಳಿಕ ಡಿ.24ರಂದು ಬೆಳಗ್ಗೆ ಕೂಡ ಆಕೆಯ ಪೋಷಕರು ಬಂದು ರಾಜಿಸಂಧಾನ ಮಾಡಿ ಹೋಗಿದ್ದರು. ಚಿನ್ನ, ಹಣ ತರುವಂತೆ ಒತ್ತಾಯ: ಲಿಖೀತ್ ಮತ್ತು ಕುಟುಂಬ ಸದಸ್ಯರು ತವರು ಮನೆಯಿಂದ ಹಣ ಹಾಗೂ ಚಿನ್ನಾಭರಣ ತರುವಂತೆ ಐಶ್ವರ್ಯಾಗೆ ಕಿರುಕುಳ ಕೊಡುತ್ತಿದ್ದರು. ಲಿಖಿತ್, ಪತ್ನಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡಿ ಮನಬಂದಂತೆ ನಿಂದಿಸುತ್ತಿ ದ್ದರು. ಪ್ರತಿ ವಿಚಾರದಲ್ಲೂ ತಾಯಿಯ ಅಣತಿಯಂತೆ ನಡೆದುಕೊಳ್ಳುತ್ತಿದ್ದರು. ಪತ್ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ವಿಷಯ ತಿಳಿದು ಐಶ್ವರ್ಯಾ ಕುಟುಂಬಸ್ಥರು ಬುಧವಾರ ಬೆಳಿಗ್ಗೆ ಲಿಖಿತ್ ಮನೆಗೆ ಬಂದು ಮಾತುಕತೆ ನಡೆಸಿ ಹೋಗಿದ್ದರು. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ಲಿಖಿತ್ ಕರೆ ಮಾಡಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

16 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago