ಬೆಂಗಳೂರು,:ವರನಟ ಡಾ.ರಾಜ್ಕುಮಾರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಅಖಿಲ ಕರ್ನಾಟಕ ಶಿವರಾಜ್ಕುಮಾರ್ ಹಾಗೂ ರಾಜರತ್ನ ಪುನೀತ್ರಾಜ್ಕುಮಾರ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ನೇತೃತ್ವದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು ಈ ಮನವಿ ಮಾಡಿಕೊಂಡಿದ್ದಾರೆ.
ಕನ್ನಡದ ನಾಡು-ನುಡಿಯನ್ನು ಮುಗಿಲೆತ್ತರಕ್ಕೇರಿಸಿದ ಕರ್ನಾಟಕ ರತ್ನ, ಪದ್ಮಭೂಷಣ ಡಾ.ರಾಜ್ಕುಮಾರ್ ಅವರಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡುವುದರ ಜತೆಗೆ ಚಾಮರಾಜನಗರ ತಾಲ್ಲೂಕಿಗೆ ಡಾ.ರಾಜ್ಕುಮಾರ್ ತಾಲ್ಲೂಕು ಎಂದು ಮರುನಾಮಕರಣ ಮಾಡಬೇಕು ಹಾಗೂ ಮಾಗಡಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ರಾಜ್ಕುಮಾರ್ ನಿಲ್ದಾಣ ಎಂದು ಹೆಸರಿಡುವಂತೆ ಅಭಿಮಾನಿಗಳು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಚಿತ್ರರಂಗದಲ್ಲಿ 34 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆಯೂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಅಭಿಮಾನಿಗಳು ಮನವಿ ಮಾಡಿಕೊಂಡರು.
ಅಭಿಮಾನಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಶ್ವಾಸನೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…